ಒಳಮೀಸಲು ವಿಧೇಯಕಕ್ಕೆ ಸರಕಾರ ರೆಡಿ

ನಗರದ ಶ್ರೀಗಂಧ ಕಾವಲ್ ನಲ್ಲಿ ಏರ್ಪಡಿಸಲಾಗಿದ್ದ ಬಾಬು ಜಗಜೀವನರಾಮ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪರಿಶಿಷ್ಟ ಜಾತಿ ಹಾಗೂ ಹಿಂದುಳಿ ವರ್ಗಕ್ಕೆ ಒಳಮೀಸಲು ಕಲ್ಪಿಸಲು ಸರಕಾರ ಬದ್ಧವಾಗಿದೆ. ಮೀಸಲಿನಲ್ಲೇ ಒಳಮೀಸಲು ಕಲ್ಪಿಸಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಧೇಯಕ ಅಂಗೀಕಾರಕ್ಕೆ ಎಲ್ಲ ಸದಸ್ಯರು ಪಕ್ಷಬೇಧ ಮರೆತು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಒಳಮೀಸಲು ಕುರಿತು ಕೇವಲ ಚರ್ಚೆ ಮಾಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಬದಲಾಗಿ ಕಾರ್ಯರೂಪಕ್ಕೆ ತರಲು ಸರ್ವಪಕ್ಷ ನಿಯೋಗ ಕರೆದೊಯ್ದು ಪ್ರಧಾನಿ ಜೊತೆ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ಯಡಿಯೂರಪ್ಪ ವಿವರಿಸಿದರು.












Click it and Unblock the Notifications