ಒಳಮೀಸಲು ವಿಧೇಯಕಕ್ಕೆ ಸರಕಾರ ರೆಡಿ

Yeddyurappa
ಬೆಂಗಳೂರು, ಏ. 15 : ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗದವರಿಗೆ ಒಳಮೀಸಲು ಕಲ್ಪಿಸುವ ಸಲುವಾಗಿ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಸರಕಾರದ ಈ ಕ್ರಮಕ್ಕೆ ಪ್ರತಿಪಕ್ಷ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ನಗರದ ಶ್ರೀಗಂಧ ಕಾವಲ್ ನಲ್ಲಿ ಏರ್ಪಡಿಸಲಾಗಿದ್ದ ಬಾಬು ಜಗಜೀವನರಾಮ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪರಿಶಿಷ್ಟ ಜಾತಿ ಹಾಗೂ ಹಿಂದುಳಿ ವರ್ಗಕ್ಕೆ ಒಳಮೀಸಲು ಕಲ್ಪಿಸಲು ಸರಕಾರ ಬದ್ಧವಾಗಿದೆ. ಮೀಸಲಿನಲ್ಲೇ ಒಳಮೀಸಲು ಕಲ್ಪಿಸಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿಧೇಯಕ ಅಂಗೀಕಾರಕ್ಕೆ ಎಲ್ಲ ಸದಸ್ಯರು ಪಕ್ಷಬೇಧ ಮರೆತು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ಒಳಮೀಸಲು ಕುರಿತು ಕೇವಲ ಚರ್ಚೆ ಮಾಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಬದಲಾಗಿ ಕಾರ್ಯರೂಪಕ್ಕೆ ತರಲು ಸರ್ವಪಕ್ಷ ನಿಯೋಗ ಕರೆದೊಯ್ದು ಪ್ರಧಾನಿ ಜೊತೆ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ಯಡಿಯೂರಪ್ಪ ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+