2013 ಕ್ಕೆ ಮೆಟ್ರೋ ರೈಲು ಸಿದ್ಧ: ಸಿಎಂ

ಸಂಪಿಗೆ ರಸ್ತೆಯ ಮಂತ್ರಿ ಸಂಕೀರ್ಣದಲ್ಲಿ ಖಾಸಗಿ ಸಹಭಾಗಿತ್ವದ 'ನಮ್ಮ ಮೆಟ್ರೋದ ಸಂಪಿಗೆ ರಸ್ತೆ' ಹಾಗೂ ಮೆಟ್ರೋ ರೈಲು ನಿಲ್ದಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಗುರುವಾರ ಸಿಎಂ ಮಾತನಾಡುತ್ತಿದ್ದರು.
ಮುಂಬರುವ ಡಿಸೆಂಬರ್ ವೇಳೆಗೆ ಭೈಯ್ಯಪ್ಪನ ಹಳ್ಳಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗಿನ ಏಳು ಕಿ.ಮೀಗಳ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ. ನಂತರ ಮೆಜೆಸ್ಟಿಕ್ ಹಾಗೂ ಹೆಸರಘಟ್ಟ ಮೆಟ್ರೋ ರೈಲು ಸಂಚರಿಸಲಿದೆ. ಮಂತ್ರಿ ಸಂಕೀರ್ಣದ ಬಳಿ 80 ಸಾವಿರ ಚದರಡಿಯ ಮೆಟ್ರೊ ರೈಲು ನಿಲ್ದಾಣ 20 ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಮಂತ್ರಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಲಿರುವ ನಿಲ್ದಾಣದ ಬಳಿ 8 ಲಕ್ಷ ಚದರಡಿಯ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಲಿದೆ. ಎರಡು ಸ್ತರದ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗುವುದು ಏಕಕಾಲಕ್ಕೆ ಸುಮಾರು 20 ಸಾವಿರ ಕಾರುಗಳ ನಿಲುಗಡೆ ಸಾಧ್ಯ ಎಂದು ಯಡಿಯೂರಪ್ಪ ಹೇಳಿದರು.
ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಮೆಟ್ರೋ ಕಾಮಗಾರಿಯ ಪ್ರಗತಿ ನಮ್ಮ ಸರ್ಕಾರದಲ್ಲಿ ಶೇ. 25ರಷ್ಟು ತೀವ್ರಗತಿಯಲ್ಲಿ ಸಾಗಿದೆ. ಮೂಲಭೂತ ಸೌಕರ್ಯಗಳು ಉದ್ದೇಶಿತ ಕಾಲಮಿತಿಯಲ್ಲಿ ಪೂರ್ಣಗೊಂಡರೆ ಯೋಜನಾವೆಚ್ಚವೂ ಕಡಿಮೆಯಾಗುತ್ತದೆ. ಜನರಿಗೂ ಅನುಕೂಲ ಎಂದು ಸಿಎಂ ಅಭಿಪ್ರಾಯಪಟ್ಟರು.
ಸಂಪಿಗೆ ಮೆಟ್ರೋ ನಿಲ್ದಾಣ ಖಾಸಗಿ ಹಾಗೂ ಸಾರ್ವಜನಿಕ ಪಾಲುದಾರಿಕೆಯಲ್ಲಿ ನಿರ್ಮಾಣಗೊಳ್ಳುವ ಮೊದಲ ನಿಲ್ದಾಣ ಎನಿಸಲಿದ್ದು, 24 ಎಕರೆ ವಿಸ್ತೀರ್ಣದ ಭೂಮಿ ಬಿಎಂಆರ್ ಸಿಎಲ್ ಸೇರಿರುತ್ತದೆ ಹಾಗೂ 35 ಕೋಟಿ ರು. ವೆಚ್ಚದಲ್ಲಿ ನಿಲ್ದಾಣವನ್ನು ಮಂತ್ರಿ ಡೆವಲಪರ್ ಸಂಸ್ಥೆ ಮಾಡಲಿದೆ. ಬರುವ ಆದಾಯವನ್ನು ಶೇಕಡಾವಾರು ಒಪ್ಪಂದದಂತೆ ಹಂಚಲಾಗುವುದು ಎಂದು ಬಿಎಂ ಆರ್ ಸಿ ಎಲ್ ನ ವ್ಯವಸ್ಥಾಪಕ ನಿರ್ದೇಶಕ ಶ್ರೀಶೈಲಂ ತಿಳಿದರು.
ಬೆಂಗಳೂರಿಗೆ ಯೋಜನೆಗಳ ಮಹಾಪೂರ: ಮುಂದಿನ ಮೂರು ವರ್ಷಗಳಲ್ಲಿ 18,872 ಕೋಟಿ ರು.ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಮೆಟ್ರೋ ನಂತರ ಮೋನೊ ರೈಲು, ವರ್ತುಲ ರೈಲು ಆರಂಭಿಸುವ ಚಿಂತನೆ ನಡೆದಿದೆ ಎಂದರು. ನಗರದಲ್ಲಿ ಕುಸಿಯುತ್ತಿರುವ ಅಂತರ್ಜಲ ಮಟ್ಟದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ, 200 ಕೋಟಿ ರು ವೆಚ್ಚದಲ್ಲಿ 25 ಕೆರೆಗಳ ಪುನರುಜ್ಜೀವನ ಹಾಗೂ ಅಭಿವೃದ್ಧಿ ಕಾರ್ಯವಾಗಲಿದೆ. ಬಿಡದಿ ಬಳಿ 1400 ಮೆ.ವ್ಯಾ ವಿದ್ಯುತ್ ಉತ್ಪಾದನಾ ಕೇಂದ್ರ ಸ್ಥಾಪಿಸಲಾಗಿದ್ದು, ವಿದ್ಯುತ್ ಸಮಸ್ಯೆ ನಿವಾರಣೆಯಾಗಲಿದೆ ಎಂದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications