ಸ್ಫೋಟ : ಬೆಂಗಳೂರಿಗೆ ಎಚ್ಚರಿಕೆಯ ಗಂಟೆ

ಸ್ಫೋಟಗಳ ತೀವ್ರತೆ ಕಡಿಮೆಯಿದ್ದು ಯಾವುದೇ ಸಾವು ನೋವು ಸಂಭವಿಸದಿದ್ದರೂ ಬೆಂಗಳೂರು ಪೊಲೀಸ್ ಮತ್ತು ರಾಜ್ಯ ಸರಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಬೆದರಿಕೆ ಒಡ್ಡಲೆಂದು ಅಥವಾ ಮುನ್ನೆಚ್ಚರಿಕೆ ನೀಡಲೆಂದು ಈ ದುಷ್ಕೃತ್ಯ ನಡೆಸಿರಬಹುದಾಗಿದೆ. ಇದು ಭಯೋತ್ಪಾದಕರು ನಗರದೊಳಗೆ ನುಸುಳಿಸಬಹುದಾದ ಸೂಚನೆ ಇರಬಹುದೆ? ತನಿಖೆಯಿಂದ ನಿಖರ ಮಾಹಿತಿ ಹೊರಬರಬೇಕಿದೆ.
ಸರಣಿ ಸ್ಪೋಟ ನಡೆದ ನಂತರ ಬೆಂಗಳೂರಿಗೆ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಶಾಪಿಂಗ್ ಮಾಲ್ ಸೇರಿದಂತೆ ಪ್ರತಿಯೊಂದು ಸ್ಥಳದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಭಯೋತ್ಪಾದಕರ ಪ್ರತಿ ಹೆಜ್ಜೆಗಳನ್ನು ಎಚ್ಚರಿಕೆಯಿಂದ ಗಮನಿಸಲಾಗುತ್ತಿದೆ. ಇಷ್ಟಾಗಿಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನಾಹುತ ಸಂಭವಿಸಿದೆ. ಕೊಂಚ ಎಚ್ಚರ ತಪ್ಪಿದ್ದರೂ ಭಯೋತ್ಪಾದಕರು ಸ್ಟೇಡಿಯಂ ಒಳಗೂ ನುಸುಳಿ ಹೆಚ್ಚಿನ ಅನಾಹುತ ಮಾಡಬಹುದಿತ್ತು.
ಎಲ್ಲಕ್ಕಿಂತ ಆಶ್ಚರ್ಯ ತರುವಂಥ ಸಂಗತಿಯೆಂದರೆ, ಮಧ್ಯಾಹ್ನ 3.15ಕ್ಕೆ ಸ್ಫೋಟಗಳು ಸಂಭವಿಸಿದ್ದರೂ ಆ ಜಾಗದಿಂದ ವಾಹನ ಸಂಚಾರದ ದಿಕ್ಕು ಬದಲಿಸುವ ಅಥವಾ ಕ್ರೀಡಾಂಗಣದ ಸುತ್ತ ಸೇರಿದ್ದ ಪ್ರೇಕ್ಷಕರನ್ನು ಸ್ಟೇಡಿಯಂನಿಂದ ದೂರ ಸರಿಸುವ ಪ್ರಯತ್ನ ಪೊಲೀಸರು ಮಾಡಿಲ್ಲ. ಇದಾವುದಕ್ಕೂ ತಲೆ ಕೆಡಿಸಿಕೊಳ್ಳದ ಪ್ರೇಕ್ಷಕರಿಗೆ ಬೇಕಿದ್ದು ಒಂದೇ, ಅದು ಪಂದ್ಯ ವೀಕ್ಷಣೆ. ಗೇಟ್ 12ರ ಬಳಿ ಸ್ಫೋಟಗೊಂಡಾಗ ಅಷ್ಟೊಂದು ಜನ ಸೇರಿರಲಿಲ್ಲ. ಪಂದ್ಯ ಶುರುವಾಗುವ ಮೊದಲು ಗೇಟ್ ಬಳಿ ಸಾವಿರಾರು ಜನ ಸೇರಿದಾಗ ಸ್ಫೋಟ ಸಂಭವಿಸಿದ್ದರೆ?
ಸ್ಟೇಡಿಯಂನಲ್ಲಿ ಭದ್ರತಾ ವ್ಯವಸ್ಥೆ ಉತ್ತಮವಾಗಿದ್ದರಿಂದ ಸ್ಫೋಟಗಳನ್ನು ಕ್ರೀಡಾಂಗಣದ ಒಳಗೆ ತೆಗೆದುಕೊಂಡು ಹೋಗಲು ಸಾಧ್ಯವಾಗಿಲ್ಲ. ಪಂದ್ಯವನ್ನು ರದ್ದು ಮಾಡದೆ ಆಟ ನಡೆಯಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ರಾಜ್ಯ ಪೊಲೀಸರ ಕ್ರಮವನ್ನು ಮೆಚ್ಚಬೇಕು. ಒಂದು ಮಾಹಿತಿಯ ಪ್ರಕಾರ, ಮಿನರಲ್ ನೀರಿನ ಬಾಟಲಿ ಮಾರುವವರು ಈ ಕೃತ್ಯ ನಡೆಸಿದ್ದಾರೆ. ಕ್ರೀಡಾಂಗಣದಲ್ಲಿ ಬಾಟಲಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡದ ಕಾರಣ ಬಾಂಬ್ ಸ್ಟೇಡಿಯಂ ಒಳಪ್ರವೇಶಿಸಲು ಸಾಧ್ಯವಾಗಿಲ್ಲ.
ಐಪಿಎಲ್ ಪಂದ್ಯಾವಳಿಗಳಿಗೆ ಭಾರಿ ಬಿಗಿ ಭದ್ರತೆಯನ್ನು ನೀಡಬೇಕು ಎಂದು ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿತ್ತು. ಸೂಚನೆಯಂತೆ ರಾಜ್ಯ ಸರಕಾರ ಪೊಲೀಸ್ ಬಂದೋಬಸ್ತ್ ನಿಯೋಜಿಸಿತ್ತು. ಆದರೆ, ಇಂತಹ ಬಿಗಿ ಪಹರೆ ನಡುವೆಯೂ ಸ್ಪೋಟ ಘಟನೆ ನಡೆದಿದೆ. ಘಟನೆ ಬಗ್ಗೆ ಕೂಡಲೇ ಪ್ರಾಥಮಿಕ ವರದಿಯನ್ನು ಕಳುಹಿಸಿಕೊಡುವಂತೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದ್ದಾರೆ. ಈ ಘಟನೆ ರಾಷ್ಟ್ರದ ಇತರ ಸ್ಥಳಗಳಲ್ಲಿ ನಡೆಯುತ್ತಿರುವ ಐಪಿಎಲ್ 3ನೇ ಆವೃತ್ತಿಯ ಪಂದ್ಯಗಳ ಮೇಲೂ ಕರಿನೆರಳು ಬೀಳುವಂತೆ ಮಾಡಿದೆ. ಪಂದ್ಯ ನಡೆಯುವ ಎಲ್ಲ ರಾಜ್ಯಗಳ ಸರಕಾರಕ್ಕೆ ಹೆಚ್ಚಿನ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications