ಸ್ಫೋಟದ ಬಗ್ಗೆ ಆತಂಕ ಬೇಡ : ಬಿದರಿ

ಬಾಂಬ್ ಸ್ಫೋಟದ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರು ಸ್ಫೋಟದ ಬಗ್ಗೆ ಆತಂಕ ಪಡುವ ಅಗತ್ಯ. ಪಂದ್ಯಕ್ಕೆ ಬೇಕಿರುವ ಸಕಲ ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದರು. ಘಟನೆಯನ್ನು ಸಿಸಿಬಿ ಪೊಲೀಸರಿಗೆ ವಹಿಸುತ್ತೇವೆ. ಘಟನೆಗೆ ಕಾರಣರಾದ ಆರೋಪಿಗಳನ್ನು ಎಲ್ಲಿದ್ದರೂ ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಮಧ್ಯಾಹ್ನ 3.15ರ ಸುಮಾರಿಗೆ ಬಾಂಬ್ ಸ್ಫೋಟಿಸಲಾಗಿದೆ. ಒಟ್ಟು 5 ಮಂದಿ ಗಾಯಗೊಂಡಿದ್ದು, ಅದರಲ್ಲಿ 2 ಪೇದೆಗಳು, 2 ಮುಖ್ಯಪೇದೆಗಳು ಮತ್ತು ಇನ್ನೂಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಪೊಲೀಸರು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿದರಿ ಹೇಳಿದ್ದಾರೆ. ಜನರೇಟರ್ ಕೆಳಗಡೆ ಕಡಿಮೆ ತೀವ್ರತೆಯ ಸ್ಫೋಟಗಳನ್ನು ಇಟ್ಟು ಸ್ಫೋಟಿಸಲಾಗಿದೆ. ಕವರ್ ನಲ್ಲಿ ನಟ್ ಮತ್ತು ಬೋಲ್ಟ್ ಗಳನ್ನು ಇರಿಸಿ ಕೃತ್ಯ ನಡೆಸಲಾಗಿದೆ ಎಂದು ಹೇಳಿದರು.
ಇವತ್ತು ಮಧ್ಯಾಹ್ನ ಕ್ರೀಡಾಂಗಣ ಹೊರಗಡೆ ನಡೆದ ಸ್ಫೋಟ ಕಡಿಮೆ ತೀವ್ರತೆ ಹೊಂದಿದ್ದು, ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜನ ಸಾಮಾನ್ಯರಿಗೆ ಏನೂ ಆಗಿಲ್ಲ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು ತೆರಳಿದ್ದು, ಪರೀಕ್ಷೆ ಆರಂಭಿಸಿದ್ದಾರೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೂ ಇಂದಿನ ಸ್ಫೋಟಕ್ಕೂ ಯಾವುದೇ ಸಾಮ್ಯತೆ ಇಲ್ಲ. ಘಟನೆ ಬಗ್ಗೆ ಈಗಾಗಲೇ ತನಿಖೆ ಆರಂಭವಾಗಿದೆ ಎಂದು ಆಚಾರ್ಯ ವಿವರಿಸಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications