ಸ್ಫೋಟಗೊಂಡಿದ್ದು ಕಡಿಮೆ ತೀವ್ರತೆಯ ಬಾಂಬ್

ಚಿನ್ನಸ್ವಾಮಿ ಸ್ಟೇಡಿಯಂನ ಅನಿಲ್ ಕುಂಬ್ಳೆ ವೃತ್ತದ ಬಳಿಯಿರುವ 12ನೇ ಗೇಟ್ ಬಳಿ ಸ್ಫೋಟ ಸಂಭವಿಸಿದೆ. ಅನಿಲ್ ಕುಂಬ್ಳೆ ವೃತ್ತದಲ್ಲಿಯೂ ಕಡಿಮೆ ತೀವ್ರತೆಯ ಇನ್ನೊಂದು ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಗಾಯವಾಗಿದ್ದು ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಮಹತ್ವದ ಪಂದ್ಯ ನಡೆಯುತ್ತಿದೆ. ಐಪಿಎಲ್ 3ನೇ ಆವೃತ್ತಿಯಲ್ಲಿ ಬೆಂಗಳೂರು ತಂಡ ಸೆಮಿ ಫೈನಲ್ ತಲುಪುವ ಹಂತ ತಲುಪಿದೆ. ಇಂದಿನ ಗೆಲುವು ಸೆಮಿ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ.
ಸ್ಫೋಟ ಸಂಭವಿಸಿದ್ದರಿಂದ ಎರಡೂ ತಂಡದ ಆಟಗಾರರು ಮೈದಾನದ ಮೇಲೆ ಇಳಿಯಲು ಹಿಂಜರಿಯುತ್ತಿದ್ದಾರೆ. ಆದರೆ, ಪ್ರೇಕ್ಷಕರ ಸ್ಫೋಟವನ್ನು ನಿರ್ಲಕ್ಷಿಸಿ ಆಟ ವೀಕ್ಷಿಸಲು ಹೆಚ್ಚಿನ ಉತ್ಸಾಹ ತೋರಿಸುತ್ತಿದ್ದಾರೆ. ಕ್ರೀಡಾಂಗಣ ಪ್ರವೇಶಿಲು ಈಗಲು ಕೂಡ ನೂರಾರು ಪ್ರೇಕ್ಷಕರು ಜಮಾಯಿಸುತ್ತಿದ್ದಾರೆ. ಸ್ಫೋಟ ಸಂಭವಿಸಿದ್ದರಿಂದ ಪಂದ್ಯ ತುಸು ತಡವಾಗಿ ಆರಂಭವಾಗಿದೆ.
ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಜನ ಯಾವುದೇ ರೀತಿಯಲ್ಲಿ ಆತಂಕಕ್ಕೊಳಗಾಗುವ ಕಾರಣವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಮನವಿ ಮಾಡಿಕೊಂಡಿದ್ದಾರೆ.
ಸ್ಫೋಟಗೊಂಡ ಸ್ಥಳವನ್ನು ವೀಕ್ಷಿಸಲು ರಸ್ತೆ ಸಂಚಾರಿಗಳು ನಿಲ್ಲುತ್ತಿರುವುದರಿಂದ ಕ್ರೀಡಾಂಗಣದ ಸುತ್ತಮುತ್ತ ವಿಪರೀತ ವಾಹನ ದಟ್ಟಣೆ ಸೃಷ್ಟಿಯಾಗಿದೆ. ಸಂಚಾರವನ್ನು ಸುಗಮಗೊಲಿಸಲು ಟ್ರಾಫಿಕ್ ಪೊಲೀಸರು ಹರಸಾಹಸಪಡುತ್ತಿದ್ದಾರೆ. 2008ರ ಜುಲೈ 25ರಂದು ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಜರುಗಿದ ಪ್ರಮುಖ ಘಟನೆ ಇದಾಗಿದೆ.
ಕನ್ನಡದಲ್ಲಿ ಸ್ಕೋರ್ ವಿವರ ತಿಳಿಯಲು ಇಲ್ಲಿ ಕ್ಲಿಕ್ಕಿಸಿ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications