ಕಾಲೇಜಿನಲ್ಲಿ ವಂಚನೆ, ತನಿಖೆಗೆ ದಲಿತರ ಆಗ್ರಹ

ಮೆಡಿಕಲ್ ಕಾಲೇಜಿನ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದ ಅವರು, ಇದಕ್ಕೆ ಹಾಲಿ ನಿರ್ದೇಶಕ ಡಾ. ಶಂಕರೇಗೌಡ ಮತ್ತು ಮಾಜಿ ನಿರ್ದೇಶಕ ಡಾ. ಚಿದಾನಂದ್ ಕಾರಣರಾಗಿದ್ದಾರೆ. ಈ ಇಬ್ಬರು ಮೆಡಿಕಲ್ ಕಾಲೇಜನ್ನು ಹರಾಜು ಹಾಕಿದ್ದು, ಇದಕ್ಕೆ ಬಿಜೆಪಿ ಸರ್ಕಾರ ಕೂಡ ಸಾಥ್ ನೀಡಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಹರಿದ ಅರೋಪಗಳ ಮಹಾಪೂರ:
* ನಿಯಮಗಳನ್ನೆಲ್ಲ ಗಾಳಿಗೆ ತೂರಿ ಪ್ರೋಫೆಸರ್ ಹುದ್ದೆಗಳನ್ನು ನೇಮಕ .ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಿಂದ ಸುಳ್ಳು ಪ್ರಮಾಣ ಪತ್ರ ಬಳಕೆ ಮಾಡಿ ಪ್ರೊಫೆಸರ್ ಹುದ್ದೆಯಲ್ಲಿರುವ ಡಾ. ಜಿ.ಎಲ್ ರವೀಂದ್ರರಿಗೆ 70,000ವೇತನ ಪಡೆದು ಸರ್ಕಾರಕ್ಕೆ ವಂಚನೆ.
* ಇದೇ ರೀತಿ ಡಾ. ಶಾರದಾ, ಡಾ. ಎಸ್.ಪಿ.ಹೆಗಡೆ ಮುಂತಾದವರಿಗೂ ಡಾ. ರವೀಂದ್ರ ಸುಳ್ಳು ಸೇವಾ ಪತ್ರವನ್ನು ಕೊಡಿಸಿದ್ದಾರೆ.
*ನಿವೃತ್ತರಾಗಿರುವ ಡಾ. ರಘುನಾಥ್, ಡಾ. ವಾಸನ್, ಡಾ. ಕದನ್ ಕೆಲಸಕ್ಕೆ ತೆಗೆದುಕೊಳ್ಳಲಾಗಿದೆ. ಇವರು ಸಂಬಳ ಹಾಗೂ ನಿವೃತ್ತಿ ವೇತನ ಎರಡನ್ನು ತೆಗೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ.
* ಡಾ.ವಾಸನ್ ಒಂದೇ ದಿನ ಮಾತ್ರ ಕೆಲಸಕ್ಕೆ ಹಾಜರಾಗಿ ತಿಂಗಳಿಗೆ 70,000 ವೇತನ ಪಡೆಯುತ್ತಿದ್ದಾರೆ. ಗೈರು ಹಾಜರಾಗಿದ್ದರೂ ಕೂಡ ಸಂಬಳ ನೀಡುವಾಗ ಪೂರ್ತಿ ಹಾಜರಾಗಿದ್ದಾರೆ ಎಂದು ನಮೂದಿಸಲಾಗಿದೆ.
* ಡಾ. ವಾಸನ್ ರೀತಿಯಲ್ಲೇ ಕೆಲವೇ ದಿನ ಕೆಲಸ ಮಾಡಿ, ಡಾ. ಸಾಗರ್, ಡಾ. ಸೌಭಾಗ್ಯಲಕ್ಷ್ಮೀ, ಡಾ. ಜಗದೀಶ್, ಡಾ. ನರಸಿಂಹಸ್ವಾಮಿ. ಡಾ. ಆರ್.ಬಿ.ಪಟೇಲ್ ಮುಂತಾದವರು ಪೂರ್ತಿ ಸಂಬಳ ಪಡೆಯುತ್ತಿದ್ದಾರೆ.
* ಡಾ. ತಹಶೀಲ್ದಾರ್ ಎಂಬುವವರು ಎಂಸಿಐನಿಂದ ಎಚ್ಚರಿಕೆಯನ್ನು ಪಡೆದರೂ ಸಹ ಖಾಸಗಿ ನರ್ಸಿಂಗ್ ಹೋಂ ನಡೆಸುತ್ತಿದ್ದಾರೆ.
* ಇತ್ತೀಚೆಗೆ ಡಾಕ್ಟರ್ ಹುದ್ದೆಯೊಂದಕ್ಕೆ ಸಂದರ್ಶನ ನಡೆಯಿತು. ನಾಲ್ಕು ಅಭ್ಯರ್ಥಿಗಳು ಹಾಜರಾಗಿದ್ದರು. ಆದರೆ, ಸಂದರ್ಶನಕ್ಕೆ ಹಾಜರಾದಗ ಬಿಜೆಪಿ ಬೆಂಬಲಿತ ಅಭ್ಯರ್ಥಿಡಾ. ಶ್ರೀಧರ್ಗೆ ಕೆಲಸ ಸಿಕ್ಕಿದೆ.
ಹೀಗೆ ಇಡೀ ಮೆಡಿಕಲ್ ಕಾಲೇಜ್ ಎಂಬುದು ವಂಚನೆಯ ಗೂಡಾಗಿದೆ. ಇಲ್ಲಿನ ನಿರ್ದೇಶಕ ಶಂಕರೇಗೌಡರು ಮುಖ್ಯಮಂತ್ರಿಗಳ ತಾಳಕ್ಕೆ ಕುಣಿಯುತ್ತಿದ್ದಾರೆ. ಮೆಡಿಕಲ್ ಕಾಲೇಜಿನ ಆಡಳಿತವನ್ನು ವೈಫಲ್ಯಕ್ಕೆ ಕಾರಣರಾಗಿದ್ದಾರೆ. ಇವರನ್ನು ಕೂಡ ಸೇವೆಯಿಂದ ಅಮಾನತ್ತುಗೊಳಿಸಿದೆ. ಸರ್ಕಾರಕ್ಕೆ ದ್ರೋಹ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಗುರುಮೂರ್ತಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹಾಲೇಶಪ್ಪ, ಶಿವಕುಮಾರ್, ರಮೇಶ್ ಚಿಕ್ಕಮರಡಿ, ರವಿ ಹರಿಗೆ ಸೇರಿದಂತೆ ಹಲವರು ಹಾಜರಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications