ಕಾಲೇಜಿನಲ್ಲಿ ವಂಚನೆ, ತನಿಖೆಗೆ ದಲಿತರ ಆಗ್ರಹ

ಮೆಡಿಕಲ್ ಕಾಲೇಜಿನ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದ ಅವರು, ಇದಕ್ಕೆ ಹಾಲಿ ನಿರ್ದೇಶಕ ಡಾ. ಶಂಕರೇಗೌಡ ಮತ್ತು ಮಾಜಿ ನಿರ್ದೇಶಕ ಡಾ. ಚಿದಾನಂದ್ ಕಾರಣರಾಗಿದ್ದಾರೆ. ಈ ಇಬ್ಬರು ಮೆಡಿಕಲ್ ಕಾಲೇಜನ್ನು ಹರಾಜು ಹಾಕಿದ್ದು, ಇದಕ್ಕೆ ಬಿಜೆಪಿ ಸರ್ಕಾರ ಕೂಡ ಸಾಥ್ ನೀಡಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಹರಿದ ಅರೋಪಗಳ ಮಹಾಪೂರ:
* ನಿಯಮಗಳನ್ನೆಲ್ಲ ಗಾಳಿಗೆ ತೂರಿ ಪ್ರೋಫೆಸರ್ ಹುದ್ದೆಗಳನ್ನು ನೇಮಕ .ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಿಂದ ಸುಳ್ಳು ಪ್ರಮಾಣ ಪತ್ರ ಬಳಕೆ ಮಾಡಿ ಪ್ರೊಫೆಸರ್ ಹುದ್ದೆಯಲ್ಲಿರುವ ಡಾ. ಜಿ.ಎಲ್ ರವೀಂದ್ರರಿಗೆ 70,000ವೇತನ ಪಡೆದು ಸರ್ಕಾರಕ್ಕೆ ವಂಚನೆ.
* ಇದೇ ರೀತಿ ಡಾ. ಶಾರದಾ, ಡಾ. ಎಸ್.ಪಿ.ಹೆಗಡೆ ಮುಂತಾದವರಿಗೂ ಡಾ. ರವೀಂದ್ರ ಸುಳ್ಳು ಸೇವಾ ಪತ್ರವನ್ನು ಕೊಡಿಸಿದ್ದಾರೆ.
*ನಿವೃತ್ತರಾಗಿರುವ ಡಾ. ರಘುನಾಥ್, ಡಾ. ವಾಸನ್, ಡಾ. ಕದನ್ ಕೆಲಸಕ್ಕೆ ತೆಗೆದುಕೊಳ್ಳಲಾಗಿದೆ. ಇವರು ಸಂಬಳ ಹಾಗೂ ನಿವೃತ್ತಿ ವೇತನ ಎರಡನ್ನು ತೆಗೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ.
* ಡಾ.ವಾಸನ್ ಒಂದೇ ದಿನ ಮಾತ್ರ ಕೆಲಸಕ್ಕೆ ಹಾಜರಾಗಿ ತಿಂಗಳಿಗೆ 70,000 ವೇತನ ಪಡೆಯುತ್ತಿದ್ದಾರೆ. ಗೈರು ಹಾಜರಾಗಿದ್ದರೂ ಕೂಡ ಸಂಬಳ ನೀಡುವಾಗ ಪೂರ್ತಿ ಹಾಜರಾಗಿದ್ದಾರೆ ಎಂದು ನಮೂದಿಸಲಾಗಿದೆ.
* ಡಾ. ವಾಸನ್ ರೀತಿಯಲ್ಲೇ ಕೆಲವೇ ದಿನ ಕೆಲಸ ಮಾಡಿ, ಡಾ. ಸಾಗರ್, ಡಾ. ಸೌಭಾಗ್ಯಲಕ್ಷ್ಮೀ, ಡಾ. ಜಗದೀಶ್, ಡಾ. ನರಸಿಂಹಸ್ವಾಮಿ. ಡಾ. ಆರ್.ಬಿ.ಪಟೇಲ್ ಮುಂತಾದವರು ಪೂರ್ತಿ ಸಂಬಳ ಪಡೆಯುತ್ತಿದ್ದಾರೆ.
* ಡಾ. ತಹಶೀಲ್ದಾರ್ ಎಂಬುವವರು ಎಂಸಿಐನಿಂದ ಎಚ್ಚರಿಕೆಯನ್ನು ಪಡೆದರೂ ಸಹ ಖಾಸಗಿ ನರ್ಸಿಂಗ್ ಹೋಂ ನಡೆಸುತ್ತಿದ್ದಾರೆ.
* ಇತ್ತೀಚೆಗೆ ಡಾಕ್ಟರ್ ಹುದ್ದೆಯೊಂದಕ್ಕೆ ಸಂದರ್ಶನ ನಡೆಯಿತು. ನಾಲ್ಕು ಅಭ್ಯರ್ಥಿಗಳು ಹಾಜರಾಗಿದ್ದರು. ಆದರೆ, ಸಂದರ್ಶನಕ್ಕೆ ಹಾಜರಾದಗ ಬಿಜೆಪಿ ಬೆಂಬಲಿತ ಅಭ್ಯರ್ಥಿಡಾ. ಶ್ರೀಧರ್ಗೆ ಕೆಲಸ ಸಿಕ್ಕಿದೆ.
ಹೀಗೆ ಇಡೀ ಮೆಡಿಕಲ್ ಕಾಲೇಜ್ ಎಂಬುದು ವಂಚನೆಯ ಗೂಡಾಗಿದೆ. ಇಲ್ಲಿನ ನಿರ್ದೇಶಕ ಶಂಕರೇಗೌಡರು ಮುಖ್ಯಮಂತ್ರಿಗಳ ತಾಳಕ್ಕೆ ಕುಣಿಯುತ್ತಿದ್ದಾರೆ. ಮೆಡಿಕಲ್ ಕಾಲೇಜಿನ ಆಡಳಿತವನ್ನು ವೈಫಲ್ಯಕ್ಕೆ ಕಾರಣರಾಗಿದ್ದಾರೆ. ಇವರನ್ನು ಕೂಡ ಸೇವೆಯಿಂದ ಅಮಾನತ್ತುಗೊಳಿಸಿದೆ. ಸರ್ಕಾರಕ್ಕೆ ದ್ರೋಹ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಗುರುಮೂರ್ತಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹಾಲೇಶಪ್ಪ, ಶಿವಕುಮಾರ್, ರಮೇಶ್ ಚಿಕ್ಕಮರಡಿ, ರವಿ ಹರಿಗೆ ಸೇರಿದಂತೆ ಹಲವರು ಹಾಜರಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications