ರಾಮನಗರ ಮದ್ಯದಂಗಡಿಯಲ್ಲಿ ರೇಣುಕಾ ಮಹಾತ್ಮೆ
ರಾಮನಗರ, ಏ. 21 : ಸದಾ ಒಂದಿಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿರುವ ಬಿಜೆಪಿಯ ವಿವಾದಗ್ರಸ್ಥ ಸಚಿವ ರೇಣುಕಾಚಾರ್ಯ ಇಂದು ದಿಢೀರನೇ ರಾಮನಗರದ ಮದ್ಯದಂಗಡಿಗೆ ಭೇಟಿ ನೀಡಿ ನಕಲಿ ಮದ್ಯ ಮಾರಾಟದ ಜಾಲವನ್ನ ಬಯಲು ಮಾಡಿದ್ದಾರೆ. ಕಳೆದೊಂದು ವಾರದ ಹಿಂದೆಯೇ ರಾಮನಗರದ ಮಂಜೇಶ್ ಬಾರ್ನಿಂದ ಮದ್ಯವನ್ನು ಸಚಿವರ ಆಪ್ತರು ಖರೀದಿಸಿದ್ದರು. ಖರೀದಿ ಮಾಡಿದ್ದ ಮದ್ಯ ನಕಲಿಯೆಂದು ಧೃಢಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ಸಚಿವರು ಏಕಾಏಕಿ ದಾಳಿ ನಡೆಸಿ ಬಾರ್ನ ದಾಸ್ತಾನು ಪುಸ್ತಕವನ್ನು ಪರಿಶೀಲಿಸಿದ್ದರು. ಜಿಲ್ಲೆಯಾಧ್ಯಾಂತ ನಕಲಿ ಮದ್ಯವನ್ನು ಈ ಮದ್ಯದಂಗಡಿಯಿಂದಲೇ ಸರಬರಾಜು ಮಾಡಲಾಗುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಇತ್ತೆಂದು ಅಬಕಾರಿ ಸಚಿವರು ಹೇಳಿದರು.
ಖಚಿತ ಮಾಹಿತಿಯ ಜಾಡು ಹಿಡಿದ ಸಚಿವ ರೇಣುಕಾಚಾರ್ಯ ಅಬಕಾರಿ ಇಲಾಖಾಧಿಕಾರಿಗಳೊಂದಿಗೆ ದಾಳಿ ನಡೆಸಿ ಬಾರ್ಗಳಲ್ಲಿ ನಡೆಯುತ್ತಿರುವ ಅಕ್ರಮವನ್ನು ಬಯಲು ಮಾಡಿದರು. ಮಟಮಟ ಮಧಾಹ್ನವೇ ದಾಳಿಯಿಟ್ಟ ರೇಮುಕಾಚಾರ್ಯ ಗುಂಡೇರಿಸಿಕೊಳ್ಳುತ್ತಿದ್ದ ಪಾನಪ್ರಿಯರ ನಿಶೆ ಇಳಿಸಿದ್ದರು. ದಾಳಿಯ ನಂತರ ಸಂಪೂರ್ಣ ವರದಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಸಚಿವ ರೇಣುಕಾಚಾರ್ಯ ಹೇಳಿದರು.
ರೇಣುಕಾಚಾರ್ಯರು ಬಾರ್ನಲ್ಲಿರುವ ಮದ್ಯ ನಕಲಿಯೋ ಅಸಲಿಯೋ ಎಂದು ಮೂಗಿನ ಕೆಳಗೆ ಬಾಟಲಿ ಇಟ್ಟು ವಾಸನೆ ಎಳೆಯುತ್ತಿದ್ದರು. ಕಲಬೆರಕೆ ಮಧ್ಯ ಯಾವುದೆಂದು ಸಚಿವರೇ ಖಚಿತವಾಗಿ ಹೇಳುತ್ತಿದ್ದರು.
ಜಿಲ್ಲೆಯ ಮದ್ಯದಂಗಡಿಗಳಲ್ಲಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದರೂ ಜಾಣಕುರುಡುತನ ಪ್ರದರ್ಶನ ಮಾಡುತ್ತಿರುವ ಅಬಕಾರಿ ಅಧಿಕಾರಿಗಳ ವೈಫಲ್ಯದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಚಿವರು ಈಗ ನಾನೇನು ಹೇಳುವುದಿಲ್ಲ ಮುಂದೆ ನೋಡಿ ಗೊತ್ತಾಗುತ್ತೆ ಎಂದು ಹೇಳಿ ನುಣುಚಿಕೊಂಡರು. ತಕ್ಷಣವೇ ನಕಲಿ ದಂಧೆಗೆ ಕಡಿವಾಣ ಹಾಕುವಲ್ಲಿ ಕ್ರಮಕೈಗೊಳ್ಳುವುದಾಗಿ ರೇಣುಕಾಚಾರ್ಯ ಹೇಳಿದರು.
ಗ್ರಾಮಪಂಚಾಯಿತಿ ಚುನಾವಣೆ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಬಕಾರಿ ಇಲಾಖೆಯಲ್ಲಿ ಬದಲಾವಣೆ ತರಲಾಗುವುದು. ಸರ್ಕಾರಕ್ಕೆ ಅನ್ಯಾಯವೆಸಗಿ ಬೊಕ್ಕಸಕ್ಕೆ ನಷ್ಟ ಮಾಡುತ್ತಿರುವ ಲಿಕ್ಕರ್ ಲಾಬಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನೂತನ ಯೋಜನೆಯನ್ನು ಜಾರಿಗೆ ತರಲಾಗುವುದೆಂದು ರೇಣುಕಾಚಾರ್ಯ ಹೇಳಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications