ಸ್ವಾಮಿಗಳಿಗೆ ಬ್ರಹ್ಮಚರ್ಯ ಕಡ್ಡಾಯವೇನಲ್ಲ

ಪ್ರಶ್ನೆ :ಬಾದಾಮಿ ತಾಲೂಕಿನ ಶಿವಯೋಗ ಮಂದಿರದ ಕುರಿತು ತಮ್ಮ ಅಭಿಪ್ರಾಯ ?
ಕೋ.ಚೆ : ಮೂಲತಃ ಶಿವಯೋಗ ಮಂದಿರದ ಕಲ್ಪನೆಯೆ ಸರಿಯಲ್ಲ. ಏಕೆಂದರೆ ಗುರುವನ್ನು ಯಾವುದೋ ಮಠದಲ್ಲಿ ತಯಾರು ಮಾಡಲು ಸಾಧ್ಯವಿಲ್ಲ. ವಟುಗಳನ್ನು ಸಿದ್ಧ ಮಾಡುವುದೆಂದರೇನು ? ಅದೇನು ಕಲ್ಲೆ ? ಮಣ್ಣೆ ? ಅದನ್ನು ತಯಾರಿಸಲು ಹೇಗೆ ಬರುತ್ತದೆ ? ಸ್ವಾಮಿಯನ್ನು ಮಾಡುವುದಲ್ಲ, ಸ್ವಾಮಿ ತಾನೆ ಆಗಬೇಕು. ಇದು ಲಿಂಗಾಯತ ಧರ್ಮಕ್ಕೆ ತದ್ವಿರುದ್ಧವಾದ ಕ್ರಿಯೆ.
ಪ್ರಶ್ನೆ : ಹಾಗಾದರೆ ಶಿವಯೋಗ ಮಂದಿರದ ಅವಶ್ಯಕತೆ?
ಕೋ.ಚೆ : ಇದರ ಅವಶ್ಯಕತೆ ಅಥವಾ ಅನಿವಾರ್ಯತೆಯೆ ಸಮಾಜಕ್ಕೆ ಇಲ್ಲ. ಇಲ್ಲಿ ವೇದ ಆಗಮಗಳನ್ನು ಕಲಿಸುತ್ತಾರೆ. ಸಂಸ್ಕೃತ ಭಾಷೆಗೆ ಬಹು ಪ್ರಾಮುಖ್ಯತೆ ಕೊಡುತ್ತಾರೆ. ಜಂಗಮನಾಗುವುದಕ್ಕೆ ಸಂಸ್ಕೃತ ಭಾಷೆ ಅನಿವಾರ್ಯ ಎಂಬಂತೆ ಮಾಡಿದ್ದಾರೆ. ಸಂಸ್ಕೃತ ಭಾಷೆಯನ್ನು ಪಾಂಡಿತ್ಯಕ್ಕಾಗಿ ಕಲಿಯಬೇಕೇ ಹೊರತು. ಅದು ಅನಿವಾರ್ಯ ಭಾಷೆಯಲ್ಲ.
ನಾನೂ ಬಿಜಾಪುರಲ್ಲಿದ್ದಾಗ ಒಂದು ಸಲ ಶಿವಯೋಗ ಮಂದಿರಕ್ಕೆ ಹೋಗಿದ್ದೇನೆ. ನೋಡಿದ್ದೇನೆ. ಅಲ್ಲಿ ಏನೂ ಅರಿಯದ ಹುಡುಗರಿರುತ್ತಾರೆ. ಅವರಿಗೆ ಏನೂ ಗೊತ್ತಿರುವುದಿಲ್ಲ. ಅವರಿಗೆಲ್ಲ ಕಾವಿ ತೊಡಿಸಿ ಸ್ವಾಮಿಗಳನ್ನಾಗಿ ಮಾಡುತ್ತಾರೆ. ಜೊತೆಗೆ ಅವರೆಲ್ಲ ಮುಂದೆ ಕಡ್ಡಾಯವಾಗಿ ಬ್ರಹ್ಮಚರ್ಯ ಪಾಲನೆ ಮಾಡಬೇಕೆಂದು ಬೇರೆ ಹೇಳುತ್ತಾರೆ !? ಇಂಥವರನ್ನೆ ತಂದು ಮುಂದೆ ಮಠಾಧಿಪತಿಯನ್ನಾಗಿ ಮಾಡುತ್ತಾರೆ.
ಪ್ರಶ್ನೆ : ಮಠಾಧಿಪತಿ ಬ್ರಹ್ಮಚರ್ಯೆ ಪಾಲನೆ ಮಾಡಲೇಬೇಕಾ ?
ಕೋ.ಚೆ : ಇಲ್ಲ. ಬಸವಾದಿ ಶರಣರು ಎಂದಿಗೂ ವಾಸ್ತವವಾದಿಗಳು. ಅವರು ಆಲೋಚಿಸಿದ ಎಲ್ಲವೂ ವೈಜ್ಞಾನಿಕ ಹಿನ್ನೆಲೆಯಿಂದ ಕೂಡಿದ್ದಾಗಿದೆ. 'ಇಂದ್ರಿಯ ನಿಗ್ರಹವ ಮಾಡಿದರೆ ಮುಂದೆ ಬಂದು ಕಾಡುವವು ಪಂಚೇಂದ್ರಿಯಂಗಳು' ಎಂದು ಹೇಳಿದ್ದು ಇದೆ ಅರ್ಥದಲ್ಲಿ. ಅಂದಿನ ಶರಣರಾರೂ ಬ್ರಹ್ಮಚರ್ಯದ ಜೀವನ ಶ್ರೇಷ್ಠ ಎಂದು ಹೇಳಲಿಲ್ಲ. ಹನ್ನೆರಡನೆಯ ಶತಮಾನದ ಬಹುತೇಕ ಶರಣರು ಮದುವೆಯಾಗಿ ಸಂಸಾರವನ್ನು ನಡೆಸಿದವರೆ ಆಗಿದ್ದಾರೆ. 'ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ' ಎಂದೆ ಹೇಳಿದ್ದಾರೆ.
ರಾಮಕೃಷ್ಣ ಪರಮಹಂಸರು ಸಂಸಾರಿಯಾಗಿಯೂ ಸನ್ಯಾಸಿಯಾಗಿದ್ದರು. ಅವರ ಶಿಷ್ಯರಾದ ವಿವೇಕಾನಂದರಿಗೂ ಕೂಡ ಅವರ ತಂದೆ ತಾಯಿಗಳು ಮಗನಿಗೆ ಮದುವೆಮಾಡಬೇಕೆಂದು ದುಂಬಾಲು ಬೀಳುತ್ತಾರೆ. ಆಗ ವಿವೇಕಾನಂದರು ಅದು ಹೇಗೋ ತಪ್ಪಿಸಿಕೊಂಡು ತಮ್ಮ ಗುರುವಾದ ರಾಮಕೃಷ್ಣ ಪರಮಹಂಸರಲ್ಲಿ ಹೋಗಿ ನನಗೆ ಮದುವೆ ಮಾಡಲು ತಂದೆ ತಾಯಿಗಳು ದುಂಬಾಲು ಬಿದ್ದಿದ್ದಾರೆ ? ನನಗೆ ಮದುವೆಯಾಗಬೇಕೆಂಬ ಆಸೆಯಿಲ್ಲ ಎಂದು ಹೇಳುತ್ತಾರೆ. ಆಗ ರಾಮಕೃಷ್ಣ ಪರಮಹಂಸರು ವಿವೇಕಾನಂದರನ್ನು ವಾರೆನೋಟದಿಂದ ನೋಡಿ 'ಮದುವೆಯಾಗು ಅದು ಒಳ್ಳೆಯದಾಗುತ್ತದೆ' ಎಂದೆ ಹೇಳುತ್ತಾರೆ. ನಾನೂ ಮದುವೆಯಾಗಿಲ್ಲವೆ ! ಒಳ್ಳೆಯ ಜೀವನಕ್ಕೆ ಮದುವೆ ಅಡ್ಡಿಯಾಗದು ಎಂದೆ ಹೇಳುತ್ತಾರೆ.
ಪ್ರಶ್ನೆ : ಹಾಗಾದರೆ ಜಂಗಮ ಅಂದರೆ?
ಕೋ.ಚೆ : ಜಂಗಮ ಅಂದರೆ ಚಲಿಸುವುದು. ಚಲಿಸುವುದು ಅಂದರೆ ನಡೆದಾಡುವ ವ್ಯಕ್ತಿಯೂ ಅಲ್ಲ. ಶರಣರ ಹಲವಾರು ವಚನಗಳಲ್ಲಿ ಬಳಕೆಯಾಗಿರುವ ಜಂಗಮ ನಂಪುಸಕಾರ್ಥದಲ್ಲಿ ಪ್ರಯೋಗವಾಗಿರುವುದೆ ಈ ಮಾತಿಗೆ ಸಾಕ್ಷಿ. ಸಮಾಜವನ್ನು ಅವರು ಜಂಗಮವೆಂದು ಕರೆದಿರುವರೆ ಹೊರತು, ಒಂದು ಜಾತಿಯನ್ನು ಜಂಗಮವೆಂದು ಕರೆದಿಲ್ಲ. ಯಾವ ಆದರ್ಶಗಳನ್ನು ಹೇಳುತ್ತಾನೋ ಅದರಂತೆ ನಡೆಯುವವನೆ ಜಂಗಮ. ಬಸವಾದಿ ಶರಣರ ಕಲ್ಪನೆಯ ಜಂಗಮವನ್ನು ಯಾವುದೋ ಕಟ್ಟಡದಲ್ಲಿ ತಯಾರು ಮಾಡುವುದಲ್ಲ. ನಿತ್ಯ ಜೀವನದ ಅನುಭವ ಪಡೆದು ಅನುಭಾವಿಯಾಗಿ ಆರೋಗ್ಯಕರ ಜೀವನ ನಡೆಸುವುದೆ ಆಗಿದೆ. ಬೀದರ ಜಿಲ್ಲೆಯ ಕೌಂಠಾ(ಬಿ) ಎಂಬಲ್ಲಿ ಈಗ ಶ್ರೀ ಸಿದ್ಧರಾಮ ಶರಣರು ಇದ್ದಾರೆ. ಅವರು ನಿಜವಾದ ಜಂಗಮರು. ಇವರನ್ನು ಯಾವುದೆ ಶಿವಯೋಗ ಮಂದಿರದಲ್ಲಿ ತಯಾರಿಸಲ್ಪಟಿಲ್ಲ. ಕರ್ನಾಟಕದ ಬಹುತೇಕ ಮಠಗಳಲ್ಲಿ ತುಂಬಿಕೊಂಡಿರುವ ಕಾವಿ ದಾರಿ ಜಂಗಮರೆಲ್ಲ ನಿತ್ಯಾನಂದ ಸ್ವಾಮಿಯ ಪಳಿಯುಳಿಕೆಗಳು ಮಾತ್ರ.
ಪ್ರಶ್ನೆ : ಶಿವಯೋಗ ಮಂದಿರಕ್ಕೆ 100 ತುಂಬಿದಾಗ ನಡೆಸಿರುವ ಸಮಾವೇಶ?
ಕೋ.ಚೆ : ಸಮಾಜದ ಜನಗಳಿಂದ ಎಪ್ಪತ್ತೈದು ಲಕ್ಷ ರೂಪಾಯಿಗಳನ್ನು ಸಂಗ್ರಹಸಿ, ಎಪ್ಪತ್ತೈದು ಜನರನ್ನೂ ಆಕರ್ಷಿಸಲಾಗದ ಸಮಾರಂಭವೆ ಜನರಿಂದ ತಿರಸ್ಕರಿಸ್ಪಟ್ಟ ಸಮಾವೇಶ ಎಂದು ಹೇಳುತ್ತದೆ. ಇದು ಬರೀ ಓಟ್ ಪಾಲಿಟಿಕ್ಸ್ಗಾಗಿ ಮಾಡಿದ ಚುನಾವಣೆ ಸಮಾವೇಶವೆ ಹೊರತು, ಮತ್ತೇನು ಅಲ್ಲ. ಶಿವಯೋಗ ಮಂದಿರ ಲಿಂಗಾಯತ ಸಮುದಾಯಕ್ಕೊಂದು ಕಳಂಕವೆ ಹೊರತು ಭೂಷಣವಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications