ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಮಾಭಾರತಿ ಬಿಜೆಪಿ ಸೇರಲಿ : ಪೇಜಾವರ ಶ್ರೀ

By Mrutyunjaya Kalmat
|
Google Oneindia Kannada News

Pejawar seer
ಹಾಸನ, ಏ. 21 : ನಾನು ಬಿಜೆಪಿಗೆ ಮಾತ್ರ ಸಲಹೆ ನೀಡುತ್ತಿಲ್ಲ. ಸಮಾಜವಾದಿಗಳೆಲ್ಲರೂ ಒಂದೇ ಪಕ್ಷದಲ್ಲಿ ಇರುವುದು ಸೂಕ್ತ. ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಆಡ್ವಾಣಿ ನಿವೃತ್ತಿ ಯೋಚನೆ ಬೇಡ ಮತ್ತು ಉಮಾಭಾರತಿ ಬಿಜೆಪಿ ಮತ್ತೆ ಸೇರುವುದು ಒಳಿತು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮಾನ ಮನಸ್ಕರು ಒಂದೇ ವೇದಿಕೆಯಲ್ಲಿ ಇರುವುದು ಸರಿಯೆನ್ನುವ ಕಾರಣಕ್ಕೆ ಉಮಾಭಾರತಿಗೆ ಈ ಸಲಹೆ ನೀಡುತ್ತಿದ್ದೇನೆ ಎಂದರು. ರಾಜ್ಯದಲ್ಲಿ ಕೃಷಿಭೂಮಿ ಸ್ವಾಧೀನ ಮಾಡಿಕೊಳ್ಳುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಸರಕಾರಕ್ಕೆ ನೀಡಿರುವ ಗಡುವನ್ನು ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆಯಲ್ಲಿ ಮೇ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಅಷ್ಟರೊಳಗೆ ಸರಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X