ಬೆಚ್ಚಿಬೀಳುವಂತೆ ಮಾಡುವ ಆಸ್ಪತ್ರೆ

ಈಗ ಇದೇ ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಮತ್ತೊಮ್ಮೆ ಚರ್ಚೆಗೆ ಬರುವಂತಾಗಿರುವುದು ಮಾತ್ರ ಶೋಷನೀಯ. ಜಿಲ್ಲೆಯ ಮತ್ತು ಹೊರ ಜಿಲ್ಲೆಗಳಿಂದಲೂ ಅನೇಕರು ತಮ್ಮ ಕಾಯಿಲೆಗಳನ್ನು ಸರಿಪಡಿಸಿಕೊಂಡು ಗುಣಮುಖರಾಗಲು ಈ ಆಸ್ಪತ್ರೆಗೆ ದಾಖಲಾಗುತ್ತಾರೆ. ಇಲ್ಲಿ ಪ್ರತಿದಿನವೂ ಸಾವಿರ ಸಾವಿರ ಸಂಖ್ಯೆಯಲ್ಲಿ ರೋಗಿಗಳು ಬರುವುದೇನೋ ಸರಿ...
ರೋಗಿಗಳು ಗುಣಮುಖರಾಗಿ ಹೊರ ಹೋಗುತ್ತಾರೋ, ಬಿಡುತ್ತಾರೋ ಆ ಮಾತು ಬೇರೆ. ಆದರೆ ರೋಗಿಗಳಿಗೆ ಬಳಸಿದಂತಹ ಸಿರೆಂಜ್, ನೀಡಲ್ಸ್, ಕೈ ಗ್ಲೌಸ್ಗಳು ಮತ್ತು ಇನ್ನಿತರ ಔಷಧಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡದೇ ಈ ತ್ಯಾಜ್ಯ ವಸ್ತುಗಳನ್ನು ಆಸ್ಪತ್ರೆಯ ಆವರಣದಲ್ಲಿ ಬೇಕಾಬಿಟ್ಟಿ ಎಸೆಯುತ್ತಾರಲ್ಲಾ ದಿ ಗ್ರೇಟ್ ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿಗಳು ಇದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರೇ ಉತ್ತರಿಸಬೇಕು.
ಪ್ರತಿದಿನ ಆಸ್ಪತ್ರೆಯಿಂದ ತ್ಯಾಜ್ಯ ವಸ್ತುಗಳು ಹೊರಬೀಳಲಿದ್ದು, ಅವುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕೆಂಬ ಆದೇಶವಿದೆ. ಆದರೂ ಇಲ್ಲಿನ ಸಿಬ್ಬಂದಿಗಳು ಆದೇಶಗಳನ್ನು ಗಾಳಿಗೆ ತೂರಿದ್ದು, ಆಸ್ಪತ್ರೆಯ ಆವರಣದಲ್ಲಿ ಖಾಲಿ ಜಾಗ ಕಣ್ಣಿಗೆ ಬಿದ್ದರೆ ಸಾಕು ಯಾರ ಮುಲಾಜಿಗೆ ಒಳಗಾಗದೆ ತ್ಯಾಜ್ಯ ವಸ್ತುಗಳನ್ನು ಆವರಣದಲ್ಲೇ ಸುರಿದು ತಮ್ಮ ಪಾಡಿಗೆ ತಾವು ಹೊರಟು ಹೋಗುತ್ತಾರೆ. ಅದೇನೆ ಇರಲಿ ಬಿಡಿ. ನಂತರದ ಸರದಿ ಚಿಂದಿ ಆಯುವವರದು. ತ್ಯಾಜ್ಯ ವಸ್ತುಗಳನ್ನು ಸುರಿದು ಅತ್ತ ಹೋದ ಕೂಡಲೇ ತಕ್ಷಣವೆ ಚಿಂದಿ ಆರಿಸುವವರು ಅಲ್ಲಿ ಪ್ರತ್ಯಕ್ಷರಾಗುತ್ತಾರೆ. ಇದರಲ್ಲಿ ಯಾವ ಪವಾಡವಿದೆಯೋ ಆ ಭಗವಂತನೇ ಬಲ್ಲ!
ಇಷ್ಟೆಲ್ಲಾ ನಡೆದರೂ ತುಕ್ಕು ಹಿಡಿದಿರುವ ಮೆಗ್ಗಾನ್ ಆಸ್ಪತ್ರೆಯ ಆಡಳಿತ ಮಂಡಳಿಗೆ ಇದ್ಯಾವುದು ಗಮನಕ್ಕೆ ಬರುವುದಿಲ್ಲ. ಆರೋಗ್ಯದ ಬಗ್ಗೆ ಸಾರ್ವಜನಿಕರಿಗೆ ಉಪದೇಶ ನೀಡುವ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಬೇಜವಾಬ್ದಾರಿತನ ತೋರುವುದು ಎಷ್ಟರ ಮಟ್ಟಿಗೆ ಸರಿ? ಏಕೆಂದರೆ ಸ್ವಲ್ಪ ಯಾಮಾರಿದರೂ ಈ ತ್ಯಾಜ್ಯ ವಸ್ತುಗಳಿಂದ ಅನೇಕ ರೋಗಗಳು (ಗುಣಪಡಿಸಲಾಗದ) ಹರಡುವ ಸಾಧ್ಯತೆ ಇದ್ದು, ತೊಂದರೆ ಉಂಟಾಗುವ ಮೊದಲೇ ತುಕ್ಕು ಹಿಡಿದಿರುವ ಮೆಗ್ಗಾನ್ ಆಸ್ಪತ್ರೆಯ ಆಡಳಿತ ಯಂತ್ರ ಶೀಘ್ರವೇ ಕಾರ್ಯಪ್ರವೃತ್ತರಾಗಿ ನಿರ್ಲಕ್ಷ್ಯ ವಹಿಸುವ ಸಿಬ್ಬಂದಿಗಳ ಮೇಲೆ ಸರಿಯಾದ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಏನಾದರೊಂದು ಅನಾಹುತ ಸಂಭವಿಸಿ ಅದಕ್ಕೆ ಸರಿಯಾದ ಬೆಲೆ ಕಟ್ಟಬೇಕಾಗುತ್ತದೆ ಎಂಬುದು ಅಷ್ಟೇ ಸತ್ಯ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications