ಗ್ರಾಮೀಣ ಜನರ ವಲಸೆ ಅಭಿವೃದ್ಧಿಯ ಸಂಕೇತ

ಜಾಗತಿಕ ಅದ್ಯಯನ ಸಂಸ್ಥೆ ಮೆಕಿನ್ಸಿ ಗ್ಲೋಬಲ್ ನಡೆಸಿರುವ ಅಧ್ಯಯನದ ಪ್ರಕಾರ, 2030ರ ಹೊತ್ತಿಗೆ ನಗರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು 97.35 ಲಕ್ಷ ಕೋಟಿ ರುಪಾಯಿಗಳನ್ನು (2.2 ಟ್ರಿಲಿಯನ್ ಡಾಲರ್) ಖರ್ಚು ಮಾಡಬೇಕಿದೆ ಎಂದು ಹೇಳಿದೆ. ಇದರಲ್ಲಿ ಸುಮಾರು 53.1 ಲಕ್ಷ ಕೋಟಿ ರುಪಾಯಿಗಳನ್ನು ಕುಡಿಯುವ ನೀರು, ಒಳ ಚರಂಡಿ, ಸಾರಿಗೆ ಹಾಗೂ ಮಿತವ್ಯಯದ ಮನೆಗಳ ನಿರ್ಮಾಣಕ್ಕೆ ವೆಚ್ಚ ಮಾಡಬೇಕಾಗಿದೆ. ಇನ್ನೆರಡು ದಶಕಗಳಲ್ಲಿ ಸುಮಾರು 1.47 ಟ್ರಿಲಿಯನ್ ಜನ ನಗರಗಳಲ್ಲಿ ವಾಸ ಮಾಡಲಿದ್ದಾರೆ ಎಂದು ಸಂಸ್ಥೆ ಅಂದಾಜಿಸಿದೆ.
ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ಜನರ ವಲಸೆ ಅಭಿವೃದ್ದಿ ಹೊಂದುತ್ತಿರುವ ದೇಶಗಳ ಲಕ್ಷಣ. 2030ರಲ್ಲಿ ನಗರ ಪ್ರದೇಶಗಳು ಶೇ 70ರಷ್ಟು ಹೊಸ ಹುದ್ದೆಗಳನ್ನು ಸೃಷ್ಟಿಸಲಿದ್ದು, ದೇಶಾದ್ಯಂತ ತಲಾ ಆದಾಯದಲ್ಲಿ ನಾಲ್ಕು ಪಟ್ಟು ಹೆಚ್ಚಳ ಆಗಲಿದೆ ಎಂದೂ ವರದಿ ಹೇಳಿದೆ.
ನಗರಗಳಿಗಾಗಿ ವ್ಯಯಿಸಬೇಕಾದ ವೆಚ್ಚ ಕೂಡ ನಿರೀಕ್ಷೆ ಮೀರಿ ಹೆಚ್ಚುತ್ತಿದೆ. ತಲಾ ಆದಾಯ ಹೆಚ್ಚಬೇಕಾದ ಅವಶ್ಯಕತೆ ಎದ್ದು ಕಾಣುತ್ತಿದೆ. ಜಿಡಿಪಿ ದರದ ಶೇ.2ರಷ್ಟನ್ನು ನಗರ ಪ್ರದೇಶಗಳಲ್ಲಿ ವೆಚ್ಚ ಮಾಡಬೇಕಾಗಿದ್ದು ಈಗ ಶೇ 0.5ರಷ್ಟನ್ನು ಮಾತ್ರ ವೆಚ್ಚ ಮಾಡಲಾಗುತ್ತಿದೆ. ನಗರ ಪ್ರದೇಶಗಳ ವಾರ್ಷಿಕ ವೆಚ್ಚ 2015ರಲ್ಲಿ 30 ಬಿಲಿಯನ್ ಡಾಲರ್, 2020ರಲ್ಲಿ 60 ಬಿಲಿಯನ್ ಡಾಲರ್ ಮತ್ತು 2030ರಲ್ಲಿ 90 ಬಿಲಿಯನ್ ಡಾಲರ್ ತಲುಪಲಿದೆ ಎಂದೂ ಅದು ಹೇಳಿದೆ.
ಈ ಹೂಡಿಕೆಯ ಶೇ 80ರಷ್ಟು ಭಾಗ ಆಂತರಿಕವಾಗೇ ಲಭ್ಯವಾಗಲಿದೆ ಎಂದು ವರದಿ ಹೇಳಿದ್ದು, ತಮಿಳುನಾಡು, ಗುಜರಾತ್, ಕರ್ನಾಟಕ, ಮಹಾರಾಷ್ಟ್ರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಹೆಚ್ಚಿನ ಜನಸಂಖ್ಯೆ ನಗರ ಪ್ರದೇಶಗಳಲ್ಲಿ ವಾಸ ಮಾಡಲಿದೆ ಎಂದು ಹೇಳಿದೆ. ಹೆಚ್ಚಿನ ಸೇವೆಗೆ ಅನುಕೂಲವಾಗುವಂತೆ ಸಂವಿಧಾನದ 74ನೇ ತಿದ್ದುಪಡಿಯನ್ನು ಅನುಷ್ಠಾನಗೊಳಿಸಿ ನಗರಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡುವಂತೆಯೂ ಅದು ಸೂಚಿಸಿದೆ. ಮಹಾನಗರಗಳಲ್ಲಿ 20-25 ಸ್ಯಾಟಲೈಟ್ ಟೌನ್ ಶಿಪ್ ಗಳನ್ನು ಸ್ಥಾಪಿಸುವ ಮೂಲಕ ಪ್ರವಾಸೀ ಹಾಗೂ ಇತರ ಉದ್ಯಮದ ಕೇಂದ್ರೀಕೃತ ನಗರಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದೂ ವರದಿ ಹೇಳಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications