ರಾಮನಗರ ಮೇಷ್ಟ್ರೆ ನೀವು ಮಾಡಿದ್ದು ಸರೀನಾ?
ರಾಮನಗರ, ಏ.23 : ಬಂಧಿತ ಸ್ವಾಮಿ ನಿತ್ಯಾನಂದನ ವಿರುದ್ಧ ಬೈಗುಳಗಳ ಸುರಿಮಳೆಗರೆದು ಚಪ್ಪಲಿ ಎಸೆದು ಸುದ್ದಿಗೆ ಗ್ರಾಸವಾಗಿದ್ದ ಶಾಲಾ ಮೇಷ್ಟ್ರು ಈಗ ಪೊಲೀಸರ ಅತಿಥಿಯಾಗಿ ಕಂಬಿ ಎಣಿಸುತ್ತಿದ್ದಾನೆ. ಮಕ್ಕಳಿಗೆ ಸಂಯಮದ ಪಾಠ ಹೇಳಬೇಕಾಗಿದ್ದ ಶಿಕ್ಷಕ ಸಂಯಮ ಕಳೆದುಕೊಂಡು ತನ್ನ ನಂಬಿಕೊಂಡ ಕುಟುಂಬವನ್ನು ಸಂಕಷ್ಟಕ್ಕೆ ದೂಡುವಂತಾಗಿದೆ.
ಚಪ್ಪಲಿ ಎಸೆದು ಪ್ರಚಾರ ಗಿಟ್ಟಿಸಿರುವ ಶ್ರೀನಿವಾಸ್ ರಾಮನಗರ ಜಿಲ್ಲೆ ಚನ್ನಪಟ್ಟಣದ ಕೆಳಮೇಗಲದೊಡ್ಡಿಯ ಪ್ರಾಥಮಿಕ ಶಾಲಾ ಶಿಕ್ಷಕ. ಮೊದಲಿನಿಂದಲೂ ಶಾಂತಮನೋಭಾವ ಹೊಂದಿರುವ ಶ್ರೀನಿವಾಸ್ ನಿತ್ಯಾನಂದನ ಕಾಮಕೇಳಿಯ ದೃಶ್ಯಾವಳಿಗಳು ಟಿವಿಗಳಲ್ಲಿ ಪ್ರಸಾರವಾಗುತ್ತಿದ್ದರೆ ಇಂತಹವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಕ್ರೋಶವ್ಯಕ್ತಪಡಿಸುತ್ತಿದ್ದರೆಂದು ಕುಟುಂಬದ ಸದಸ್ಯರು ಹೇಳುತ್ತಾರೆ.
ನಿತ್ಯಾನಂದ ಬರುವಿಕೆಯ ಮಾಹಿತಿ ತಿಳಿದು ಪತ್ರಕರ್ತನ ಸೋಗಿನಲ್ಲಿ ಬಂದು ನಿತ್ಯಾನಂದನ ಮೇಲೆ ಚಪ್ಪಲಿ ಎಸೆದಿದ್ದಾರೆ. ಈಗ ಪೊಲೀಸರ ಅತಿಥಿಯಾಗಿರುವ ಶ್ರೀನಿವಾಸನ ತಪ್ಪನ್ನ ಮನ್ನಿಸಿ ಶಿಕ್ಷೆಯಾಗದಂತೆ ಮಾಡಬೇಕೆಂಬುದು ಕುಟುಂಬದವರು ಮನವಿ ಮಾಡಿಕೊಳ್ಳುತ್ತಿದ್ದಾರೆ. ತನ್ನ ಸಹೋದ್ಯೋಗಳೊಂದಿಗೆ ಚರ್ಚಿಸುವಾಗಲೂ ನಿತ್ಯಾನಂದನಿಗೆ ಶಿಕ್ಷೆಯಾದಾಗ ಮಾತ್ರ ಧರ್ಮ ಉಳಿಯಲು ಸಾಧ್ಯ ಎಂದು ಹೇಳುತ್ತಿದ್ದರೆಂದು ಸಹಶಿಕ್ಷಕ ಗಿರೀಶ್ ಹೇಳುತ್ತಾರೆ. ಶ್ರೀನಿವಾಸ್ರವರು ನಡೆದುಕೊಂಡಿದ್ದು ಸರಿಯಿಲ್ಲದಿದ್ದರೂ ಕುಟುಂಬದ ದೃಷ್ಟಿಯಿಂದ ಶ್ರೀನಿವಾಸರನ್ನ ಬಿಡುಗಡೆಗೊಳಿಸಬೇಕೆಂದು ಸಹಶಿಕ್ಷಕರು ಮನವಿ ಮಾಡಿದ್ದಾರೆ.
ಇಂತಿಪ್ಪ ಶ್ರೀನಿವಾಸ್ ವಿಚಿತ್ರ ಹವ್ಯಾಸಗಳನ್ನೂ ಬೆಳೆಸಿಕೊಂಡಿದ್ದರು. ಊರಿಗೆ ಬಂದ ಖ್ಯಾತನಾಮರೊಂದಿಗೆ ಫೋಟೋ ತೆಗೆಸಿಕೊಳ್ಳುವುದು ಅವುಗಳಲ್ಲೊಂದು. ರಾಜಕುಮಾರ್ ಅವರ ಭಕ್ತರಾಗಿರುವ ಶ್ರೀನಿವಾಸ್ ಅವರ ಮಕ್ಕಳಾದ ಶಿವರಾಜ್ ಕುಮಾರ್, ಪುನೀತ್ ರಾಜಕುಮಾರ್ ಅವರೊಂದಿಗೆ ಛಾಯಾಚಿತ್ರ ತೆಗೆಸಿಕೊಂಡಿದ್ದಾರೆ.
ಇಬ್ಬರು ಹೆಂಡಿರ ಮುದ್ದಿನ ಗಂಡ : ವಿಚಿತ್ರ ಮತ್ತು ವಿಶಿಷ್ಟ ವ್ಯಕ್ತಿತ್ವದ ಶಿಕ್ಷಕ ಶ್ರೀನಿವಾಸನಿಗೂ ಇಬ್ಬರು ಹೆಂಡಿರು ಎಂಬ ವಿಷಯ ಬೆಳಕಿಗೆ ಬಂದಿದೆ. ಶ್ರೀನಿವಾಸನ ಪತ್ನಿಯೊಬ್ಬರು ಶಿಕ್ಷಕಿಯಾಗಿದ್ದಾರೆ. ಇಬ್ಬರು ಹೆಂಡಿರ ಗಂಡನಾಗಿಯೂ ನಿತ್ಯಾನಂದನ ಕಾಮಕೇಳಿಯ ಬಗ್ಗೆ ಆಕ್ರೋಶವ್ಯಕ್ತಪಡಿಸಿ ಚಪ್ಪಲಿಸೇವೆ ಮಾಡಿದ್ದು ಧರ್ಮದ ಬಗ್ಗೆಯಿರುವ ಕಾಳಜಿಯಿಂದಲ್ಲ ಕೇವಲ ಪ್ರಚಾರಕ್ಕಾಗಿ ಶ್ರೀನಿವಾಸ್ ಚಪ್ಪಲಿಸೇವೆ ಮಾಡಿರಬಹುದೆಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications