ಶಿವಮೊಗ್ಗದಲ್ಲಿ ಭಾನುವಾರ ಸಿಎಂಗೆ ಭರ್ತಿ ಕೆಲಸ

ಮೊಟ್ಟ ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರವೇ ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಹಣ ನೀಡಿದ್ದು, ಸುಮಾರು 9.6 ಕೋಟಿ ರು.ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಗೊಂಡಿದೆ. ಈ ನೂತನ ಬಸ್ ನಿಲ್ದಾಣದಲ್ಲಿ ಒಟ್ಟು 40 ಬಸ್ಸುಗಳನ್ನು ನಿಲ್ಲಿಸಬಹುದಾಗಿದ್ದು, ನಿಲ್ದಾಣದಲ್ಲಿ ಹೊಟೇಲ್ ಹಾಗೂ ಅಂಗಡಿಗಳಿಗೆ ವಿಶಾಲ ಸ್ಥಳವನ್ನು ಮೀಸಲಿಡಲಾಗಿದೆ. ಹಾಗೆಯೇ ನಿಲ್ದಾಣದಲ್ಲಿ ಶೌಚಾಲಯದ ವ್ಯವಸ್ಥೆಯನ್ನು ಮಾಡಲಾಗಿದೆ.
ಸುಮಾರು 8 ಕೋಟಿ ರು.ಗೂ ಅಧಿಕ ವೆಚ್ಚದಲ್ಲಿ ನೆಹರೂ ಕ್ರೀಡಾಂಗಣದ ಹಿಂಭಾಗದಲ್ಲಿ ನಿರ್ಮಾಣವಾಗಿರುವ ವಿಶಾಲ ಒಳಾಂಗಣ ಕ್ರೀಡಾಂಗಣ ಉದ್ಘಾಟನೆಗೊಳ್ಳಲಿದೆ. ಈ ಒಳಾಂಗಣ ಕ್ರೀಡಾಂಗಣದಲ್ಲಿ 1200 ಜನ ಕುಳಿತುಕೊಳ್ಳಲು ಆಸನ ವ್ಯವಸ್ಥೆಯನ್ನು ಮಾಡಲಾಗಿದೆ. ಜೊತೆಗೆ 2 ವಾಲಿಬಾಲ್, 2 ಬಾಸ್ಕೆಟ್ ಬಾಲ್, 1 ಹ್ಯಾಂಡ್ ಬಾಲ್, 14 ಬ್ಯಾಡ್ಮಿಂಟನ್ ಅಂಕಣಗಳಿದ್ದು, ವಿಶೇಷವಾಗಿ ಪೆಡ್ಲೈಟ್, ವಿಶ್ರಾಂತಿ ಕೊಠಡಿ, ಕ್ರೀಡಾಪಟುಗಳಿಗೆ ವಸತಿ ಗೃಹ, ಅತಿಥಿಗೃಹ, ಶೌಚಾಲಯ ವ್ಯವಸ್ಥೆಯನ್ನು ಕ್ರೀಡಾಂಗಣಕ್ಕೆ ಕಲ್ಪಿಸಲಾಗಿದೆ.
ಸುಮಾರು 4.5 ಕೋಟಿ ರು. ವೆಚ್ಚದಲ್ಲಿ ಸರ್ಕಿಟ್ ಹೌಸ್ ನಿರ್ಮಾಣಗೊಂಡಿರುವ ಸುವರ್ಣ ಸಂಸ್ಕೃತಿ ಭವನವನ್ನು ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ. ಇದರಲ್ಲಿ ಆಡಳಿತ ಕಛೇರಿ ಸೇರಿದಂತೆ ಮಲೆನಾಡಿನ ಕಲೆಗಳ ಪ್ರದರ್ಶನ ಕಲಾಗ್ಯಾಲರಿ, ಸುಸಜ್ಜಿತ ಗ್ರಂಥಾಲಯ, ನಾಟಕ ರಿಹರ್ಸಲ್ ಕೊಠಡಿ ಹಾಗೂ 300 ಆಸನಗಳ ವ್ಯವಸ್ಥೆ ಜೊತೆಗೆ ಸಂಪೂರ್ಣ ಹವಾ ನಿಯಂತ್ರಣದಿಂದ ಕೂಡಿದೆ. ನಗರಸಾರಿಗೆ ಬಸ್ ನಿಲ್ದಾಣದ ಪಕ್ಕದಲ್ಲಿರುವ ಟ್ಯಾಕ್ಸಿ ನಿಲ್ದಾಣ ಹಾಗೂ ಮುಂಗಡ ಪಾವತಿ, ಆಟೋ ನಿಲ್ದಾಣಕ್ಕೂ ಶಂಕು ಸ್ಥಾಪನೆ ನೆರವೇರಿಸಲಿರುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರಾದ ಸಿ.ಎಂ.ಉದಾಸಿ, ರಾಮಚಂದ್ರೇ ಗೌಡ, ಗೂಳಿಹಟ್ಟಿ ಶೇಖರ್, ಹರತಾಳು ಹಾಲಪ್ಪ, ಬಾಲಚಂದ್ರ ಜಾರಕಿಹೊಳಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಡಿ.ಹೆಚ್.ಶಂಕರ ಮೂರ್ತಿ, ಸಂಸದ ಬಿ.ವೈ. ರಾಘವೇಂದ್ರ ಮುಂತಾದವರು ಭಾಗವಹಿಸಲಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications