ಬೆಂಗಳೂರಿನಲ್ಲಿ ಶೀಘ್ರ ಹಜ್ ಭವನ: ವಕ್ಫ್ ಸಚಿವ

ಸುದ್ದಿಗಾರೊಂದಿಗೆ ಮಾತನಾಡುತ್ತಿದ್ದ ಸಚಿವರು, ದರ್ಗಾಗೆ ಸೇರಿದ ಭೂಮಿಯನ್ನು ಖರೀದಿಸಲಾಗುತ್ತಿದ್ದು ಶೀಘ್ರದಲ್ಲೇ ಹಜ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗುತ್ತದೆ. ಹಜ್ ಯಾತ್ರೆಗೆ ಹೊರಡುವ ಮುಸ್ಲಿಂ ಬಾಂಧವರ ಅಗತ್ಯಗಳನ್ನು ಈ ಭವನ ಪೂರೈಸಲಿದೆ ಎಂದರು.
ರಾಜ್ಯದಲ್ಲಿ ಗೋಹತ್ಯೆ ನಿಷೇಧದಿಂದ ಉಂಟಾಗಿರುವ ನಿರುದ್ಯೋಗ ಸಮಸ್ಯೆಗೆ ಪರ್ಯಾಯ ಉದ್ಯೋಗಗಳನ್ನು ಹುಡುಕಲಾಗುತ್ತಿದೆ. ಗೋಹತ್ಯೆ ನಿಷೇಧದಿಂದ ನಿರುದ್ಯೋಗಿಗಳಾಗಿರುವವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.












Click it and Unblock the Notifications