ಮೈಂಡ್ ಟ್ರೀಗೆ ಗುರುತು ಚೀಟಿ ಗುತ್ತಿಗೆ?

ದೇಶದ ಪ್ರಮುಖ ಸಾಫ್ಟವೇರ್ ಕಂಪೆನಿಗಳಾದ ಟಿಸಿ ಎಸ್, ಇನ್ಫೋಸಿಸ್, ವಿಪ್ರೋ ಮತ್ತು ಹೆಚ್ ಸಿಎಲ್ ಟೆಕ್ನಾಲಜೀಸ್ ಕಂಪೆನಿಗಳನ್ನು ತಾಂತ್ರಿಕ ಕಾರಣಗಳಿಂದಾಗಿ ಬಿಡ್ಡಿಂಗ್ ನಿಂದ ಹೊರಗಿಡಲಾಗಿತ್ತು. ಈ ಗುತ್ತಿಗೆಯಲ್ಲಿ ಒಟ್ಟು ಮೂರು ಕಂಪೆನಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು ಇದರಲ್ಲಿ ಮೈಂಡ್ ಟ್ರೀ ವಿಜೇತನಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ ಏಪ್ರಿಲ್ 26 ರಂದು ಗುತ್ತಿಗೆಯ ವಿಜೇತನನ್ನು ಪ್ರಕಟಿಸಲಿದೆ ಎನ್ನಲಾಗಿದೆ.
ಕಳೆದ ಜನವರಿಯಲ್ಲಿ ಗುರುತು ಚೀಟಿ ಪ್ರಾಧಿಕಾರ ವಿನ್ಯಾಸ, ಅಭಿವೃದ್ದಿ, ಪರೀಕ್ಷೆ, ಬೆಂಬಲ ಮತ್ತು ಸಾಫ್ಟ್ ವೇರ್ ನ ನಿರ್ವಹಣೆಗೆ ಕಂಪೆನಿಗಳಿಂದ ಬಿಡ್ ಗಳನ್ನು ಆಹ್ವಾನಿಸಿತ್ತು. ಇದಕ್ಕೆ ದೇಶದ 19 ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಬಿಡ್ ಸಲ್ಲಿಸಿದ್ದವು. ಇದರಲ್ಲಿ ಪ್ರಾಧಿಕಾರ ಅಂತಿಮವಾಗಿ 3 ಕಂಪೆನಿಗಳನ್ನು ಶಾರ್ಟ್ ಲಿಸ್ಟ್ ಮಾಡಿತ್ತು. ವಿಶಿಷ್ಟ ಗುರುತು ಚೀಟಿಗಳನ್ನು ಆಗಸ್ಟ್ 2010 ರಿಂದ ಫೆಬ್ರವರಿ 2011 ರವರೆಗೆ ಮೊದಲ ಕಂತಿನಲ್ಲಿ ವಿತರಣೆ ಮಾಡಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ನಂದನ್ ನೀಲೇಕಣಿ ಹೇಳಿದ್ದಾರೆ.
ಮುಂದಿನ 5 ವರ್ಷಗಳಲ್ಲಿ 600 ಮಿಲಿಯನ್ ಗುರುತು ಚೀಟಿಗಳನ್ನು ವಿತರಿಸುವ ಯೋಜನೆ ಹಾಕಿಕೊಂಡಿದ್ದು ಕಳೆದ ವರ್ಷ ಬಜೆಟ್ ನಲ್ಲಿ ಪ್ರಾಧಿಕಾರಕ್ಕೆ 120 ಕೋಟಿ ರೂ ಹಾಗೂ ಈ ವರ್ಷ 1900 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಈ ಯೋಜನೆಯಲ್ಲಿ ಒಟ್ಟು ಮಾಹಿತಿ ತಂತ್ರಜ್ಞಾನ ಸೇವೆಗಳಾದ ಕಂಪ್ಯೂಟಿಂಗ್, ಡಾಟಾ ಬೇಸ್, ಸ್ಮಾರ್ಟ್ ಕಾರ್ಡ್ ಇತ್ಯಾದಿಗಳಿಗೆ ಸುಮಾರು 15 ರಿಂದ 20 ಸಾವಿರ ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಿದ್ದು ಇದರಲ್ಲಿ ಪಾಲ್ಗೊಳ್ಳಲು ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಹೆಚ್ಚಿನ ಆಸಕ್ತಿ ತೋರಿದ್ದವು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications