ಸಿಇಟಿ 2010 : ಗಣಿತ ಪೇಪರ್ ಕಷ್ಟ ಕಷ್ಟ!

ಬೆಳಗ್ಗೆ ನಡೆದ ಜೀವಶಾಸ್ತ್ರ ಮತ್ತು ಮಧ್ಯಾಹ್ನ ನಡೆದ ಗಣಿತ ಪರೀಕ್ಷೆಗಳು ವಿದ್ಯಾರ್ಥಿಗಳ ಪಾಲಿಗೆ ಸಿಂಹಸ್ವಪ್ನವಾಗಿ ಪರಿಣಮಿಸಿವೆ. ಪ್ರತಿ ವರ್ಷದಂತೆ ಈ ಸಲ ಪ್ರಶ್ನೆ ಪತ್ರಿಕೆಯನ್ನು ತೆಗೆಯಲಾಗಿಲ್ಲ ಎನ್ನುವುದು ವಿದ್ಯಾರ್ಥಿಗಳು ದೂರು. ಪ್ರಶ್ನೆಗೆ ನೀಡಿರುವ ಆಯ್ಕೆ ಉತ್ತರಗಳು ತೀವ್ರ ಗೊಂದಲಮಯವಾಗಿದ್ದವು. ಇರುವ ನಾಲ್ಕು ಆಯ್ಕೆಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದೇ ದೊಡ್ಡ ಪ್ರಶ್ನೆಯಾಗಿತ್ತು ಎನ್ನುವುದು ವಿದ್ಯಾರ್ಥಿಗಳ ಗೋಳಾಗಿದೆ.
ನಾನು ಕನಿಷ್ಟ ಎಂದರೂ ಕಳೆದ 5 ವರ್ಷಗಳ ಸಿಇಟಿ ಪ್ರಶ್ನೆ ಪತ್ರಿಕೆಯನ್ನು ಅಭ್ಯಾಸ ಮಾಡಿ ಸಂಪೂರ್ಣ ತಯಾರಿಯಾಗಿ ಪರೀಕ್ಷೆ ಎದುರಿಸಿದ್ದೆ. ಆದರೆ, ನನಗೆ ಈ ಸಲದ ಪ್ರಶ್ನೆ ಪತ್ರಿಕೆ ನೋಡಿ ಏನು ಮಾಡಬೇಕು ಎನ್ನುವುದೇ ತೋಚಲಿಲ್ಲ. ವರ್ಷ ಪೂರ್ತಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಓದಿರುವ ನನಗೆ ಈ ಗತಿಯಾದರೆ, ಉಳಿದವರು ಗತಿ ಹೇಗೆ ? ಒಟ್ಟಿನಲ್ಲಿ ಹೇಳುವುದಾದರೆ, ಜೀವಶಾಸ್ತ್ರ ಇದ್ದುದರಲ್ಲಿ ಓಕೆ, ಗಣಿತ ಪರೀಕ್ಷೆಯಂತೂ ಟಫ್ ಆಗಿತ್ತು ಎನ್ನುತ್ತಾರೆ ಧಾರವಾಡ ಜೆಎಸ್ಎಸ್ ಕಾಲೇಜಿನ ವಿದ್ಯಾರ್ಥಿನಿ ಕವಿತಾ.
ನಾನು ವೆಕೇಷನ್ ಹೋಗಿ ಹಳೆಯ ಎಲ್ಲ ಪ್ರಶ್ನೆ ಪತ್ರಿಕೆಯನ್ನೂ ರೆಫರ್ ಮಾಡಿದರೂ ನನಗೆ ಈ ಸಲ ಸಿಇಟಿ ಎದುರಿಸುವುದು ತುಂಬಾ ಕಷ್ಟವಾಯಿತು. ಸಾಕಷ್ಟು ತಯಾರಿ ನಡೆಸಿದ ನನಗೆ ತುಂಬಾ ನಿರಾಶೆಯಾಗಿದೆ. ಗಣಿತ ಪ್ರಶ್ನೆ ಪತ್ರಿಕೆಯಂತೂ ನಮ್ಮ ಸಾಮರ್ಥ್ಯಕ್ಕೆ ಮೀರಿದ ಪ್ರಶ್ನೆ ಪತ್ರಿಕೆಯಾಗಿತ್ತು. ಪ್ರತಿ ವರ್ಷದ ಪ್ರಶ್ನೆ ಪತ್ರಿಕೆಯಾಗಿದ್ದರೆ ಯಾವ ಸಮಸ್ಯೆಯೂ ಇರುತ್ತಿರಲಿಲ್ಲ. ಆದರೆ, ಈ ಸಲದ ಪ್ರಶ್ನೆ ಪತ್ರಿಕೆ ಬೇರೆ ತರನಾಗಿದೆ ಎನ್ನುವುದು ನ್ಯಾಷನಲ್ ಹೈಸ್ಕೂಲ್ ನ ಮಹೇಶ್ ನ ದೂರಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications