ಸಿಇಟಿ 2010 : ಗಣಿತ ಪೇಪರ್ ಕಷ್ಟ ಕಷ್ಟ!

ಬೆಳಗ್ಗೆ ನಡೆದ ಜೀವಶಾಸ್ತ್ರ ಮತ್ತು ಮಧ್ಯಾಹ್ನ ನಡೆದ ಗಣಿತ ಪರೀಕ್ಷೆಗಳು ವಿದ್ಯಾರ್ಥಿಗಳ ಪಾಲಿಗೆ ಸಿಂಹಸ್ವಪ್ನವಾಗಿ ಪರಿಣಮಿಸಿವೆ. ಪ್ರತಿ ವರ್ಷದಂತೆ ಈ ಸಲ ಪ್ರಶ್ನೆ ಪತ್ರಿಕೆಯನ್ನು ತೆಗೆಯಲಾಗಿಲ್ಲ ಎನ್ನುವುದು ವಿದ್ಯಾರ್ಥಿಗಳು ದೂರು. ಪ್ರಶ್ನೆಗೆ ನೀಡಿರುವ ಆಯ್ಕೆ ಉತ್ತರಗಳು ತೀವ್ರ ಗೊಂದಲಮಯವಾಗಿದ್ದವು. ಇರುವ ನಾಲ್ಕು ಆಯ್ಕೆಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದೇ ದೊಡ್ಡ ಪ್ರಶ್ನೆಯಾಗಿತ್ತು ಎನ್ನುವುದು ವಿದ್ಯಾರ್ಥಿಗಳ ಗೋಳಾಗಿದೆ.
ನಾನು ಕನಿಷ್ಟ ಎಂದರೂ ಕಳೆದ 5 ವರ್ಷಗಳ ಸಿಇಟಿ ಪ್ರಶ್ನೆ ಪತ್ರಿಕೆಯನ್ನು ಅಭ್ಯಾಸ ಮಾಡಿ ಸಂಪೂರ್ಣ ತಯಾರಿಯಾಗಿ ಪರೀಕ್ಷೆ ಎದುರಿಸಿದ್ದೆ. ಆದರೆ, ನನಗೆ ಈ ಸಲದ ಪ್ರಶ್ನೆ ಪತ್ರಿಕೆ ನೋಡಿ ಏನು ಮಾಡಬೇಕು ಎನ್ನುವುದೇ ತೋಚಲಿಲ್ಲ. ವರ್ಷ ಪೂರ್ತಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಓದಿರುವ ನನಗೆ ಈ ಗತಿಯಾದರೆ, ಉಳಿದವರು ಗತಿ ಹೇಗೆ ? ಒಟ್ಟಿನಲ್ಲಿ ಹೇಳುವುದಾದರೆ, ಜೀವಶಾಸ್ತ್ರ ಇದ್ದುದರಲ್ಲಿ ಓಕೆ, ಗಣಿತ ಪರೀಕ್ಷೆಯಂತೂ ಟಫ್ ಆಗಿತ್ತು ಎನ್ನುತ್ತಾರೆ ಧಾರವಾಡ ಜೆಎಸ್ಎಸ್ ಕಾಲೇಜಿನ ವಿದ್ಯಾರ್ಥಿನಿ ಕವಿತಾ.
ನಾನು ವೆಕೇಷನ್ ಹೋಗಿ ಹಳೆಯ ಎಲ್ಲ ಪ್ರಶ್ನೆ ಪತ್ರಿಕೆಯನ್ನೂ ರೆಫರ್ ಮಾಡಿದರೂ ನನಗೆ ಈ ಸಲ ಸಿಇಟಿ ಎದುರಿಸುವುದು ತುಂಬಾ ಕಷ್ಟವಾಯಿತು. ಸಾಕಷ್ಟು ತಯಾರಿ ನಡೆಸಿದ ನನಗೆ ತುಂಬಾ ನಿರಾಶೆಯಾಗಿದೆ. ಗಣಿತ ಪ್ರಶ್ನೆ ಪತ್ರಿಕೆಯಂತೂ ನಮ್ಮ ಸಾಮರ್ಥ್ಯಕ್ಕೆ ಮೀರಿದ ಪ್ರಶ್ನೆ ಪತ್ರಿಕೆಯಾಗಿತ್ತು. ಪ್ರತಿ ವರ್ಷದ ಪ್ರಶ್ನೆ ಪತ್ರಿಕೆಯಾಗಿದ್ದರೆ ಯಾವ ಸಮಸ್ಯೆಯೂ ಇರುತ್ತಿರಲಿಲ್ಲ. ಆದರೆ, ಈ ಸಲದ ಪ್ರಶ್ನೆ ಪತ್ರಿಕೆ ಬೇರೆ ತರನಾಗಿದೆ ಎನ್ನುವುದು ನ್ಯಾಷನಲ್ ಹೈಸ್ಕೂಲ್ ನ ಮಹೇಶ್ ನ ದೂರಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications