ಬಿಜೆಪಿ ಸರಕಾರಕ್ಕೆ ಕಾಂಗ್ರೆಸ್ ಬೆಂಬಲ : ಕುಮಾರಸ್ವಾಮಿ

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಕೆಲ ನಾಯಕರು ರಾತ್ರೋರಾತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತಾರೆ. ಇಂತಹ ನಾಯಕರ ಪರೋಕ್ಷ ಬೆಂಬಲದಿಂದಲೇ ಬಿಜೆಪಿ ಸರ್ಕಾರ ರಾಜ್ಯದಲ್ಲಿದೆ ಉಳಿದಿದೆ ಎಂದರು. ಕೆಲ ತಿಂಗಳ ಹಿಂದೆ ಜೆಡಿಎಸ್ ಶಾಸಕರಿಗೆ ಸಿಹಿ ಸುದ್ದಿ ನೀಡುವ ಭರವಸೆ ನೀಡಿದ್ದು ನಿಜ. ಈ ಸಿಹಿ ಸುದ್ದಿಯನ್ನೇ ಕಹಿ ಮಾಡಿದ ಕ್ರೆಡಿಟ್ ಕಾಂಗ್ರೆಸ್ ನಾಯಕರಿಗೆ ಸಲ್ಲಬೇಕು ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಪಕ್ಷ ಪ್ರತಿಪಕ್ಷ ಸ್ಥಾನವನ್ನು ಯಾವ ಮಟ್ಟದಲ್ಲಿ ನಿಭಾಯಿಸುತ್ತಿದೆ ಎಂದು ಆ ಪಕ್ಷದ ನಾಯಕರು ಆತ್ಮಾಲೋಕನ ಮಾಡಿಕೊಳ್ಳಬೇಕು. ಬಿಜೆಪಿ ಸರ್ಕಾರದ ವೈಫಲ್ಯ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುವುದನ್ನು ಜೆಡಿಎಸ್ ಕೈಬಿಡುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.











Click it and Unblock the Notifications