ರಾಮನಗರ ಜೈಲಿಗೆ ಸ್ವಾಮಿ ನಿತ್ಯಾನಂದ
ರಾಮನಗರ, ಏ. 30 : ಲೈಂಗಿಕ ಹಗರಣದಲ್ಲಿ ಸಿಲುಕಿರುವ ವಿವಾದಾತ್ಮಕ ಸ್ವಾಮೀಜಿ ನಿತ್ಯಾನಂದನನ್ನು ಮೇ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ರಾಮನಗರ ಜಿಲ್ಲಾ ಕಾರಾಗೃಹದಲ್ಲಿಡಲಾಗಿದೆ.
ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡಬೇಕೆಂಬ ಸರಕಾರಿ ವಕೀಲರ ಬೇಡಿಕೆಯನ್ನು ಪುರಸ್ಕರಿಸದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ನಾರಾಯಣ್ ಪ್ರಸಾದ್ ಅವರು ನಿತ್ಯಾನಂದನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ನಟಿ ರಂಜಿತಾ ಜೊತೆ ವಿಡಿಯೋದಲ್ಲಿ ಸೆರೆಸಿಕ್ಕ ನಂತರ ತಲೆಮರೆಸಿಕೊಂಡಿದ್ದ ನಿತ್ಯಾನಂದ ಹಿಮಾಚಲ ಪ್ರದೇಶದಲ್ಲಿ ಬಂಧಿತನಾದ ನಂತರ ಕಳೆದ ಹತ್ತು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ.
ಹೃದಯಬೇನೆ ಮತ್ತು ಪುರಷತ್ವವಿಲ್ಲವೆಂದು ನಾಟಕ ಮಾಡಿ ನಿತ್ಯಾನಂದ ಸಿಐಡಿ ಪೊಲೀಸರಿಗೆ ತನಿಖೆಗೆ ಸಮರ್ಪಕವಾಗಿ ಸ್ಪಂದಿಸದೇ ಸುಸ್ತು ಮಾಡಿದ್ದ. ಈಗಾಗಲೇ ಮೂರು ಸಾರಿ ರಾಮನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲದಲ್ಲಿ ಕೈಕಟ್ಟಿ ನಿಂತಿದ್ದ ನಿತ್ಯಾನಂದನಿಗೆ ಜಾಮೀನು ನೀಡದೇ ಪೊಲೀಸ್ ಕಸ್ಟಡಿಗೆ ನೀಡಿದ್ದರು. ಆಶ್ರಮದಲ್ಲಿ ನಿತ್ಯಾನಂದನೊಡನೆ ಹಾಸಿಗೆ ಹಂಚಿಕೊಂಡಿದ್ದು ನಾನಲ್ಲ ಎಂದು ರಂಜಿತಾ ಹೇಳಿದ್ದರಿಂದ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಆದರೆ, ಲೈಂಗಿಕ ವಿಡಿಯೋದಲ್ಲಿ ಇದ್ದದ್ದು ನಿತ್ಯಾನಂದ ಮತ್ತು ರಂಜಿತಾರೇ ಎಂದು ಹೈದರಾಬಾದ್ ನ ವಿಧಿವಿಜ್ಞಾನ ಸಂಸ್ಥೆ ದೃಢಪಡಿಸಿದೆ.
ಈ ನಡುವೆ ಬಿಡದಿಯ ನಿತ್ಯಾನಂದ ಧ್ಯಾನಪೀಠದಲ್ಲಿ ಅಕ್ರಮವಾಗಿ ಗಂಧದ ತುಂಡು ದಾಸ್ತಾನು ಸಂಗ್ರಹಿಸಿದ್ದನೆಂದು ದಾಖಲಿಸಲಾದ ಪ್ರಕರಣದಲ್ಲಿ ನಿತ್ಯಾನಂದನಿಗೆ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶೆ ವಿಜಯಲಕ್ಷ್ಮಿಯವರು ಜಾಮೀನು ನೀಡಿದ್ದಾರೆ.
ಎಂದಿನಂತೆ ಖಾಕಿ ಬೆಂಗಾವಲಿನಲ್ಲಿ ಅಂಬಾಸಿಡರ್ ಕಾರಿನಲ್ಲಿ ಬಂದ ನಿತ್ಯಾನಂದ ಹಸನ್ಮುಖಿಯಾಗಿಯೇ ಕೋರ್ಟ್ ಪ್ರವೇಶ ಮಾಡಿದ. ಸುಮಾರು 30 ನಿಮಿಷಗಳ ಕಾಲ ನಿತ್ಯಾನಂದ ಕೋರ್ಟ್ನಲ್ಲಿ ವಿಚಾರಣೆ ಸಂದರ್ಭದಲ್ಲಿ ರುದ್ರಾಕ್ಷಿ ಮಣಿ ಮಾಲೆ ಹಿಡಿದು ಜಪ ಮಾಡುತ್ತಲೇ ಇದ್ದ. ಜೈಲಿಗೆ ಕಳಿಸುವ ಆದೇಶ ಬಂದು ಕೋರ್ಟಿನಿಂದ ಹೊರಬಂದನಂತರವೂ ಹಸನ್ಮುಖಿಯಾಗೇ ಇದ್ದ. ಮುಂದಿನ ವಿಚಾರಣೆ ಮೇ 12ರಂದು ನಡೆಯಲಿದೆ ಎಂದು ಸರ್ಕಾರಿ ಅಭಿಯೋಜಕ ಲೋಕೇಶ್ ಸುದ್ದಿಗಾರರಿಗೆ ತಿಳಿಸಿದರು.
ನಿಲುವಂಗಿ ನಿತ್ಯಾನಂದನಿಗೆ ಜೈಲಿನಲ್ಲೂ ವೈದ್ಯರ ಸಲಹೆ ಮೇರೆಗೆ ಆಹಾರ ನೀಡುವಂತೆ ಹೇಳಲಾಗಿದೆ. ಯಾವುದೇ ಕಾರಣಕ್ಕೂ ವಿಶೇಷ ಉಪಚಾರ ನೀಡದಂತೆ ಹಾಗೂ ಧ್ಯಾನ, ಪ್ರಾರ್ಥನೆ ಮಾಡಲು ಅವಕಾಶ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು.
ನಿತ್ಯಾನಂದ ಪೊಲೀಸ್ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಆದೇಶ ಹೊರಬರುತ್ತಿದ್ದಂತೆ ಹಸನ್ಮುಖಿಯಾಗಿಯೇ ಹೊರಬಂದ ನಿತ್ಯಾನಂದ ಸರ್ಕಾರಿ ಅಭಿಯೋಜಕ ಲೋಕೇಶ್ರವರ ಕೈಮುಟ್ಟಿ ನಮಸ್ಕರಿಸಿದ. ನಿತ್ಯಾನಂದ ಇರುವ ಜೈಲಿನ ಸುತ್ತ ಪೊಲೀಸರ ಸರ್ಪಗಾವಲು ಹಾಕಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications