ರಾಮನಗರ ಜೈಲಿಗೆ ಸ್ವಾಮಿ ನಿತ್ಯಾನಂದ
ರಾಮನಗರ, ಏ. 30 : ಲೈಂಗಿಕ ಹಗರಣದಲ್ಲಿ ಸಿಲುಕಿರುವ ವಿವಾದಾತ್ಮಕ ಸ್ವಾಮೀಜಿ ನಿತ್ಯಾನಂದನನ್ನು ಮೇ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ರಾಮನಗರ ಜಿಲ್ಲಾ ಕಾರಾಗೃಹದಲ್ಲಿಡಲಾಗಿದೆ.
ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡಬೇಕೆಂಬ ಸರಕಾರಿ ವಕೀಲರ ಬೇಡಿಕೆಯನ್ನು ಪುರಸ್ಕರಿಸದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ನಾರಾಯಣ್ ಪ್ರಸಾದ್ ಅವರು ನಿತ್ಯಾನಂದನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ನಟಿ ರಂಜಿತಾ ಜೊತೆ ವಿಡಿಯೋದಲ್ಲಿ ಸೆರೆಸಿಕ್ಕ ನಂತರ ತಲೆಮರೆಸಿಕೊಂಡಿದ್ದ ನಿತ್ಯಾನಂದ ಹಿಮಾಚಲ ಪ್ರದೇಶದಲ್ಲಿ ಬಂಧಿತನಾದ ನಂತರ ಕಳೆದ ಹತ್ತು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ.
ಹೃದಯಬೇನೆ ಮತ್ತು ಪುರಷತ್ವವಿಲ್ಲವೆಂದು ನಾಟಕ ಮಾಡಿ ನಿತ್ಯಾನಂದ ಸಿಐಡಿ ಪೊಲೀಸರಿಗೆ ತನಿಖೆಗೆ ಸಮರ್ಪಕವಾಗಿ ಸ್ಪಂದಿಸದೇ ಸುಸ್ತು ಮಾಡಿದ್ದ. ಈಗಾಗಲೇ ಮೂರು ಸಾರಿ ರಾಮನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲದಲ್ಲಿ ಕೈಕಟ್ಟಿ ನಿಂತಿದ್ದ ನಿತ್ಯಾನಂದನಿಗೆ ಜಾಮೀನು ನೀಡದೇ ಪೊಲೀಸ್ ಕಸ್ಟಡಿಗೆ ನೀಡಿದ್ದರು. ಆಶ್ರಮದಲ್ಲಿ ನಿತ್ಯಾನಂದನೊಡನೆ ಹಾಸಿಗೆ ಹಂಚಿಕೊಂಡಿದ್ದು ನಾನಲ್ಲ ಎಂದು ರಂಜಿತಾ ಹೇಳಿದ್ದರಿಂದ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಆದರೆ, ಲೈಂಗಿಕ ವಿಡಿಯೋದಲ್ಲಿ ಇದ್ದದ್ದು ನಿತ್ಯಾನಂದ ಮತ್ತು ರಂಜಿತಾರೇ ಎಂದು ಹೈದರಾಬಾದ್ ನ ವಿಧಿವಿಜ್ಞಾನ ಸಂಸ್ಥೆ ದೃಢಪಡಿಸಿದೆ.
ಈ ನಡುವೆ ಬಿಡದಿಯ ನಿತ್ಯಾನಂದ ಧ್ಯಾನಪೀಠದಲ್ಲಿ ಅಕ್ರಮವಾಗಿ ಗಂಧದ ತುಂಡು ದಾಸ್ತಾನು ಸಂಗ್ರಹಿಸಿದ್ದನೆಂದು ದಾಖಲಿಸಲಾದ ಪ್ರಕರಣದಲ್ಲಿ ನಿತ್ಯಾನಂದನಿಗೆ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶೆ ವಿಜಯಲಕ್ಷ್ಮಿಯವರು ಜಾಮೀನು ನೀಡಿದ್ದಾರೆ.
ಎಂದಿನಂತೆ ಖಾಕಿ ಬೆಂಗಾವಲಿನಲ್ಲಿ ಅಂಬಾಸಿಡರ್ ಕಾರಿನಲ್ಲಿ ಬಂದ ನಿತ್ಯಾನಂದ ಹಸನ್ಮುಖಿಯಾಗಿಯೇ ಕೋರ್ಟ್ ಪ್ರವೇಶ ಮಾಡಿದ. ಸುಮಾರು 30 ನಿಮಿಷಗಳ ಕಾಲ ನಿತ್ಯಾನಂದ ಕೋರ್ಟ್ನಲ್ಲಿ ವಿಚಾರಣೆ ಸಂದರ್ಭದಲ್ಲಿ ರುದ್ರಾಕ್ಷಿ ಮಣಿ ಮಾಲೆ ಹಿಡಿದು ಜಪ ಮಾಡುತ್ತಲೇ ಇದ್ದ. ಜೈಲಿಗೆ ಕಳಿಸುವ ಆದೇಶ ಬಂದು ಕೋರ್ಟಿನಿಂದ ಹೊರಬಂದನಂತರವೂ ಹಸನ್ಮುಖಿಯಾಗೇ ಇದ್ದ. ಮುಂದಿನ ವಿಚಾರಣೆ ಮೇ 12ರಂದು ನಡೆಯಲಿದೆ ಎಂದು ಸರ್ಕಾರಿ ಅಭಿಯೋಜಕ ಲೋಕೇಶ್ ಸುದ್ದಿಗಾರರಿಗೆ ತಿಳಿಸಿದರು.
ನಿಲುವಂಗಿ ನಿತ್ಯಾನಂದನಿಗೆ ಜೈಲಿನಲ್ಲೂ ವೈದ್ಯರ ಸಲಹೆ ಮೇರೆಗೆ ಆಹಾರ ನೀಡುವಂತೆ ಹೇಳಲಾಗಿದೆ. ಯಾವುದೇ ಕಾರಣಕ್ಕೂ ವಿಶೇಷ ಉಪಚಾರ ನೀಡದಂತೆ ಹಾಗೂ ಧ್ಯಾನ, ಪ್ರಾರ್ಥನೆ ಮಾಡಲು ಅವಕಾಶ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು.
ನಿತ್ಯಾನಂದ ಪೊಲೀಸ್ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಆದೇಶ ಹೊರಬರುತ್ತಿದ್ದಂತೆ ಹಸನ್ಮುಖಿಯಾಗಿಯೇ ಹೊರಬಂದ ನಿತ್ಯಾನಂದ ಸರ್ಕಾರಿ ಅಭಿಯೋಜಕ ಲೋಕೇಶ್ರವರ ಕೈಮುಟ್ಟಿ ನಮಸ್ಕರಿಸಿದ. ನಿತ್ಯಾನಂದ ಇರುವ ಜೈಲಿನ ಸುತ್ತ ಪೊಲೀಸರ ಸರ್ಪಗಾವಲು ಹಾಕಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications