Get Updates
Get notified of breaking news, exclusive insights, and must-see stories!

ಹೊಗೇನಕಲ್ ಧೂಳು : ಖರ್ಗೆ ಮುಂದೆ ಕರವೇ

Kannada Activists
ಬೆಂಗಳೂರು, ಏ. 30 : ವಿವಾದಿತ ಹೊಗೇನಕಲ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಕಾರ್ಮಿಕ ಮಂತ್ರಿ ಮಲ್ಲಿಕಾರ್ಜುನ ಖರ್ಗೆ ಅವರ ಮೌನ ವಹಿಸಿರುವುದನ್ನು ವಿರೋಧಿಸಿ ಅವರ ನಿವಾಸದ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮನೆ ಮುಂದೆಯೂ ಪ್ರತಿಭಟನೆ ನಡೆಸಿದರು.

ತಮಿಳುನಾಡು ಸರಕಾರ ಅಕ್ರಮವಾಗಿ ರಾಜ್ಯ ಜಾಗದಲ್ಲಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಆರಂಭಿಸಿದೆ. ಈ ಪ್ರದೇಶ ಮೂರನೇ ಒಂದು ಭಾಗ ಕರ್ನಾಟಕಕದ್ದು. ಒಂದು ಭಾಗ ಮಾತ್ರ ತಮಿಳುನಾಡಿಗೆ ಸೇರಿದ್ದು. ಹೀಗಾಗಿ, ಕರುಣಾನಿಧಿ ಸರಕಾರ ರಾಜ್ಯಕ್ಕೆ ಸೇರಿದ ಭೂಮಿಯನ್ನು ರಾಜಾರೋಷವಾಗಿ ಕಬಳಿಕೆ ಮಾಡಿಕೊಂಡು ಯೋಜನೆಯ ಕಾಮಗಾರಿಯನ್ನು ಆರಂಭಿಸಿದೆ. ರಾಜ್ಯಕ್ಕೆ ಅನ್ಯಾಯವಾದರೂ ಕರ್ನಾಟಕವನ್ನು ಪ್ರತಿನಿಧಿಸುವ ಸಂಸದರು ಮಾತುನಾಡುತ್ತಿಲ್ಲವೇಕೆ ಎಂದು ಕರವೇ ಅಧ್ಯಕ್ಷ ಟಿ ವಿ ನಾರಾಯಣಗೌಡ ಪ್ರಶ್ನಿಸಿದರು.

ಸಂಸತ್ ಅಧಿವೇಶನ ನಡೆಯುತ್ತಿದ್ದರೂ ಕೇಂದ್ರದ ಮಂತ್ರಿಗಳಾದ ಮಲ್ಲಿಕಾರ್ಜುನ ಖರ್ಗೆ, ಎಸ್ ಎಂ ಕೃಷ್ಣ, ಕೆ ಎಚ್ ಮುನಿಯಪ್ಪ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಏನು ಮಾಡುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ನಮ್ಮ ಸಂಸದರು ರಾಜ್ಯದ ಹಿತಾಸಕ್ತಿಯನ್ನು ಮರೆತಿದ್ದಾರೆ ಎಂದು ಕಿಡಿಕಾರಿದರು. ಯೋಜನೆ ವಿರೋಧಿಸಿ ಮೇ 6 ರಂದು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ನಾರಾಯಣಗೌಡ ಹೇಳಿದರು. ಖರ್ಗೆ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+