ಉನ್ನತ ಶಿಕ್ಷಣದಲ್ಲಿ ಸಂಶೋಧನೆಗೆ ಪ್ರಾಶಸ್ತ್ಯ ಅಗತ್ಯ

ಅವರು ಶುಕ್ರವಾರ ಬೆಂಗಳೂರು ವಿಶ್ವವಿದ್ಯಾನಿಲಯದ 45ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದರು. ಭಾರತದ ಉನ್ನತ ಶಿಕ್ಷಣ ಕ್ಷೇತ್ರ ಇಂದು ವಿಚಿತ್ರ ಸನ್ನಿವೇಶವನ್ನು ಎದುರಿಸುತ್ತಿದೆ. ದೇಶದಲ್ಲಿ ರಾಷ್ಟ್ರೀಯ ಪ್ರಯೋಗಶಾಲೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಉತ್ತಮ ಆರ್ಥಿಕ ನೆರವು, ಸಿಬ್ಬಂದಿ ಎಲ್ಲವನ್ನೂ ಹೊಂದಿವೆ. ಆದರೆ ಇಲ್ಲಿ ಸಂಶೋಧನೆ ಮಾತ್ರ ನಡೆಯುತ್ತಿದ್ದು, ಬೋಧನೆಗೆ ಅವಕಾಶವೇ ಇಲ್ಲ. ಮತ್ತೊಂದೆಡೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳೂ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಲ್ಲಿ ಬೋಧನೆಗೇ ಪ್ರಾಶಸ್ತ್ಯ ನೀಡಲಾಗುತ್ತಿದೆ. ಸಂಶೋಧನೆಗೆ ಅತಿ ಕಡಿಮೆ ಅವಕಾಶವಿದೆ. ಆದರೆ ಉನ್ನತ ಶಿಕ್ಷಣ ಬೋಧನೆ ಮತ್ತು ಸಂಶೋಧನೆಯ ಸಂಗಮವಾಗಬೇಕು. ಈ ನಿಟ್ಟಿನಲ್ಲಿ ಐಐಟಿಗಳು, ನೂತನವಾಗಿ ಸ್ಥಾಪಿಸಲಾದ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳು ಉತ್ತಮ ಉದಾಹರಣೆ ಎಂದು ತಿಳಿಸಿದರು.
ಸ್ವಾಗತ ಭಾಷಣ ಮಾಡಿದ ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎನ್. ಪ್ರಭುದೇವ್ ಅವರು ಮಾತನಾಡಿ, ವಿಶ್ವವಿದ್ಯಾಲಯವು ಕೇವಲ ತನ್ನ ಜ್ಞಾನದ ಅವಶ್ಯಕತೆಗಾಗಿ ಅಲ್ಲ, ಸಮಾಜದ ಹಿತಕ್ಕಾಗಿಯೇ ಅಸ್ತಿತ್ವವನ್ನು ಪಡೆದಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು ವಿವಿಯಲ್ಲಿ ಸಂಶೋಧನೆ ಮತ್ತು ಶೈಕ್ಷಣಿಕ ಬೆಳವಣಿಗೆಗಾಗಿ ಪ್ರತಿ ವಿಭಾಗಕ್ಕೂ ಎಲ್ಲ ರೀತಿಯ ಸೌಲಭ್ಯಗಳನ್ನು ಕೊಟ್ಟು ಸ್ವಾವಲಂಬಿಯಾಗಿ ಮಾಡಲು ಉದ್ದೇಶಿಸಲಾಗಿದ್ದು ಇದಕ್ಕಾಗಿ 1 ಕೋಟಿ ರೂಪಾಯಿ ತೆಗೆದಿಡಲಾಗಿದೆ. ಇದರೊಂದಿಗೆ ಸಂಶೋಧನಾ ಚಟುವಟಿಕೆಯನ್ನು ಉತ್ತೇಜಿಸಲು ರೂ. 1 ಕೋಟಿ ಮೀಸಲಿಡಲಾಗಿದೆ ಎಂದರು.
ಪರೀಕ್ಷಾ ವಿಭಾಗದಲ್ಲೂ ಗಣನೀಯ ಸುಧಾರಣೆಗಳನ್ನು ಮಾಡಲಾಗಿದ್ದು, ಕೇವಲ 22 ದಿನಗಳಲ್ಲಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದೆ. ಮರು ಮೌಲ್ಯಮಾಪನ ಬರುವ ಅರ್ಜಿಗಳ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆಯಾಗಿದೆ ಎಂದು ಅವರು ತಿಳಿಸಿದರು. ಹನ್ನೊಂದನೇ ಪಂಚವಾರ್ಷಿಕ ಯೋಜನೆಯಡಿ ಬೆಂಗಳೂರು ವಿಶ್ವವಿದ್ಯಾಲಯವನ್ನು ಪೊಟೆನ್ಷಿಯಲ್ ಫಾರ್ ಎಕ್ಸಲೆನ್ಸ್ ಎಂದು ಗುರುತಿಸಲಾಗಿದೆ ಎಂದು ಅವರು ವಿವರಿಸಿದರು.
ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಿದರು. ಸಹ ಕುಲಾಧಿಪತಿಗಳೂ ಆದ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ












Click it and Unblock the Notifications