ಉನ್ನತ ಶಿಕ್ಷಣದಲ್ಲಿ ಸಂಶೋಧನೆಗೆ ಪ್ರಾಶಸ್ತ್ಯ ಅಗತ್ಯ

ಅವರು ಶುಕ್ರವಾರ ಬೆಂಗಳೂರು ವಿಶ್ವವಿದ್ಯಾನಿಲಯದ 45ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದರು. ಭಾರತದ ಉನ್ನತ ಶಿಕ್ಷಣ ಕ್ಷೇತ್ರ ಇಂದು ವಿಚಿತ್ರ ಸನ್ನಿವೇಶವನ್ನು ಎದುರಿಸುತ್ತಿದೆ. ದೇಶದಲ್ಲಿ ರಾಷ್ಟ್ರೀಯ ಪ್ರಯೋಗಶಾಲೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಉತ್ತಮ ಆರ್ಥಿಕ ನೆರವು, ಸಿಬ್ಬಂದಿ ಎಲ್ಲವನ್ನೂ ಹೊಂದಿವೆ. ಆದರೆ ಇಲ್ಲಿ ಸಂಶೋಧನೆ ಮಾತ್ರ ನಡೆಯುತ್ತಿದ್ದು, ಬೋಧನೆಗೆ ಅವಕಾಶವೇ ಇಲ್ಲ. ಮತ್ತೊಂದೆಡೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳೂ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಲ್ಲಿ ಬೋಧನೆಗೇ ಪ್ರಾಶಸ್ತ್ಯ ನೀಡಲಾಗುತ್ತಿದೆ. ಸಂಶೋಧನೆಗೆ ಅತಿ ಕಡಿಮೆ ಅವಕಾಶವಿದೆ. ಆದರೆ ಉನ್ನತ ಶಿಕ್ಷಣ ಬೋಧನೆ ಮತ್ತು ಸಂಶೋಧನೆಯ ಸಂಗಮವಾಗಬೇಕು. ಈ ನಿಟ್ಟಿನಲ್ಲಿ ಐಐಟಿಗಳು, ನೂತನವಾಗಿ ಸ್ಥಾಪಿಸಲಾದ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳು ಉತ್ತಮ ಉದಾಹರಣೆ ಎಂದು ತಿಳಿಸಿದರು.
ಸ್ವಾಗತ ಭಾಷಣ ಮಾಡಿದ ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎನ್. ಪ್ರಭುದೇವ್ ಅವರು ಮಾತನಾಡಿ, ವಿಶ್ವವಿದ್ಯಾಲಯವು ಕೇವಲ ತನ್ನ ಜ್ಞಾನದ ಅವಶ್ಯಕತೆಗಾಗಿ ಅಲ್ಲ, ಸಮಾಜದ ಹಿತಕ್ಕಾಗಿಯೇ ಅಸ್ತಿತ್ವವನ್ನು ಪಡೆದಿರುತ್ತದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು ವಿವಿಯಲ್ಲಿ ಸಂಶೋಧನೆ ಮತ್ತು ಶೈಕ್ಷಣಿಕ ಬೆಳವಣಿಗೆಗಾಗಿ ಪ್ರತಿ ವಿಭಾಗಕ್ಕೂ ಎಲ್ಲ ರೀತಿಯ ಸೌಲಭ್ಯಗಳನ್ನು ಕೊಟ್ಟು ಸ್ವಾವಲಂಬಿಯಾಗಿ ಮಾಡಲು ಉದ್ದೇಶಿಸಲಾಗಿದ್ದು ಇದಕ್ಕಾಗಿ 1 ಕೋಟಿ ರೂಪಾಯಿ ತೆಗೆದಿಡಲಾಗಿದೆ. ಇದರೊಂದಿಗೆ ಸಂಶೋಧನಾ ಚಟುವಟಿಕೆಯನ್ನು ಉತ್ತೇಜಿಸಲು ರೂ. 1 ಕೋಟಿ ಮೀಸಲಿಡಲಾಗಿದೆ ಎಂದರು.
ಪರೀಕ್ಷಾ ವಿಭಾಗದಲ್ಲೂ ಗಣನೀಯ ಸುಧಾರಣೆಗಳನ್ನು ಮಾಡಲಾಗಿದ್ದು, ಕೇವಲ 22 ದಿನಗಳಲ್ಲಿ ಫಲಿತಾಂಶ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದೆ. ಮರು ಮೌಲ್ಯಮಾಪನ ಬರುವ ಅರ್ಜಿಗಳ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆಯಾಗಿದೆ ಎಂದು ಅವರು ತಿಳಿಸಿದರು. ಹನ್ನೊಂದನೇ ಪಂಚವಾರ್ಷಿಕ ಯೋಜನೆಯಡಿ ಬೆಂಗಳೂರು ವಿಶ್ವವಿದ್ಯಾಲಯವನ್ನು ಪೊಟೆನ್ಷಿಯಲ್ ಫಾರ್ ಎಕ್ಸಲೆನ್ಸ್ ಎಂದು ಗುರುತಿಸಲಾಗಿದೆ ಎಂದು ಅವರು ವಿವರಿಸಿದರು.
ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಿದರು. ಸಹ ಕುಲಾಧಿಪತಿಗಳೂ ಆದ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications