ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನಲ್ಲಿ ಕನ್ನಡ ಶಾಲೆಗಳು ಬ್ಯಾನ್

By Mrutyunjaya Kalmat
|
Google Oneindia Kannada News

ಬೆಂಗಳೂರು, ಮೇ. 2 : ತಮಿಳುನಾಡು ಸರಕಾರ ಕನ್ನಡ ಶಾಲೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕನ್ನಡ ಶಾಲಾ ಮಕ್ಕಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಹೊಗೇನಕಲ್ ವಿವಾದದ ಬೆಂಕಿಯಲ್ಲಿ ಮುಖ್ಯಮಂತ್ರಿ ಕರುಣಾನಿಧಿ ತುಪ್ಪ ಸುರಿವಿದ್ದಾರೆ.

ತಮಿಳುನಾಡಿನಲ್ಲಿರುವ ಕನ್ನಡ ಶಾಲೆಗಳ ಅಭಿವೃದ್ದಿಗೆ ಸರಕಾರ 50 ಕೋಟಿ ರುಪಾಯಿಗಳನ್ನು ಬಜೆಟ್ ನಲ್ಲಿ ಮೀಸಲಿಟ್ಟಿತ್ತು. ಅಷ್ಟರಲ್ಲೇ ಅಲ್ಲಿನ ಸರಕಾರ ಈ ಆದೇಶ ಹೊರಡಿಸಿರುವುದು ಅಚ್ಚರಿ ತಂದಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಕುರಿತು ವರದಿ ತರಿಸಿಕೊಂಡು ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶನಿವಾರಕ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿರುವ 64 ಕನ್ನಡ ಶಾಲೆಗಳನ್ನು ಮುಚ್ಚುವಂತೆ ಅಲ್ಲಿನ ಸರಕಾರ ಆದೇಶ ಹೊರಡಿಸಿರುವ ಕುರಿತು ಪತ್ರಿಕೆಯಲ್ಲಿ ಪ್ರಕರಣವಾಗಿದೆ. ವರದಿಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಅವರು, ತಮಿಳುನಾಡು ಸರಕಾರ ಹೊರಡಿಸಿರುವ ಆದೇಶ ಪರಿಶೀಲಿಸಿದ ನಂತರ ಈ ಕುರಿತು ಅಲ್ಲಿನ ಮುಖ್ಯಮಂತ್ರಿಯೊಂದಿಗೆ ಮಾತನಾಡಿ, ಅನ್ಯಾಯ ಸರಿಪಡಿಸುವಂತೆ ಕೋರಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X