ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಹಾಲಪ್ಪ ವಿರುದ್ಧ ಕ್ರಿಮನಲ್ ಕೇಸ್ ಹಾಕಿ : ಸಿದ್ದು
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಚಿವ ಹಾಲಪ್ಪ ರಾಜೀನಾಮೆ ನೀಡಿದ್ದು ಏಕೆ ? ಎಂದು ವಾಗ್ದಾಳಿ ಆರಂಭಿಸಿದ ಸಿದ್ಧು, ಪ್ರಕರಣ ಅತ್ಯಂತ ಗಂಭೀರವಾಗಿದೆ. ಹೀಗಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು. ಜವಾಬ್ದಾರಿಯತ ಸ್ಥಾನದಲ್ಲಿರುವ ಸಚಿವ ಸ್ನೇಹಿತನ ಪತ್ನಿಯನ್ನೇ ಅತ್ಯಾಚಾರ ಎಸಗಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಕಪ್ಪು ಚುಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕರಣಗದ ಬಗ್ಗೆ ಹೇಳಿಕೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಮಧ್ಯ ಯುವಕಾಂಗ್ರೆಸ್ ಕಾರ್ಯಕರ್ತರು ಪ್ರಕರಣ ವಿರೋಧಿಸಿ ಯಡಿಯೂರಪ್ಪ ಅವರ ಮನಗೆ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಆರ್ ವಿ ದೇಶಪಾಂಡೆ ಸುದ್ದಿಗೋಷ್ಠಿ ನಡೆಸಿ, ಸಚಿವ ಹಾಲಪ್ಪ ಮತ್ತು ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ದೂರಿದ್ದಾರೆ.
Comments
ಹರತಾಳು ಹಾಲಪ್ಪ ಶಿವಮೊಗ್ಗ ಅತ್ಯಾಚಾರ ಯಡಿಯೂರಪ್ಪ ಬಿಜೆಪಿ ಕ್ರೈಂ ಕೆಎಸ್ ಈಶ್ವರಪ್ಪ haratalu halappa yediyurappa bjp crime beat ks eshwarappa district news shivamogga
Story first published: Sunday, May 2, 2010, 11:55 [IST]