ಕಸಬ್ ತಪ್ಪಿತಸ್ಥ: ವಿಶೇಷ ಕೋರ್ಟ್ ತೀರ್ಪು

ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಭಾರತೀಯ ಮೂಲದ ಫಾಹೀಮ್ ಅನ್ಸಾರಿ ಮತ್ತು ಸಬಾವುದ್ಧೀನ್ ಅವರನ್ನು ಸೂಕ್ತ ಸಾಕ್ಷ್ಯ ಸಿಗದ ಕಾರಣ ನ್ಯಾಯಾಲಯ ಖುಲಾಸೆಗೊಳಿಸಿದೆ.
ಮುಂಬೈಯ ಅರ್ಥರ್ ರಸ್ತೆಯ ಜೈಲಿನಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ಕುರಿತು ತೀರ್ಪು ನೀಡಿದ ನ್ಯಾಯಾಧೀಶ ಎಂಎಲ್ ತೆಹಿಲಿಯಾನಿ, 2008ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನ ಮೂಲದ ಕಸಬ್ ಅಪರಾಧಿಯಾಗಿರುವುದು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ. ಮಂಗಳವಾರ ಕಸಬ್ ನಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಗುವುದು ಎಂದು ಹೇಳಿದರು.
ಮುಂಬೈ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ, ವಿಜಯ್ ಸಲಸ್ಕರ್, ಅಶೋಕ್ ಕಾಮ್ಟೆ ಹಾಗೂ ತುಕಾರಾಂ ಒಂಬ್ಳೆ ಸೇರಿ ಅನೇಕ ಯೋಧರನ್ನು ಹಾಗೂ ದಕ್ಷ ಅಧಿಕಾರಿಗಳನ್ನು ಕಸಬ್ ಕೊಂದಿರುವುದನ್ನು ಸ್ವತಃ ಅವನೇ ಒಪ್ಪಿಕೊಂಡಿದ್ದ. ಆದರೆ, ಲಷ್ಕರ್ ನಂಟು ಹಾಗೂ ಮುಂಬೈ ಭಯೋತ್ಪಾದನೆಯಲ್ಲಿ ಕೈವಾಡವಿದೆ ಎಂಬ ಆರೋಪದ ಮೇಲೆ ಫಾಹೀಮ್ ಅನ್ಸಾರಿ ಮತ್ತು ಸಬಾವುದ್ಧೀನ್ ಅವರನ್ನು ಬಂಧಿಸಲಾಗಿತ್ತು. ಸುದೀರ್ಘ ವಿಚಾರಣೆ ನಂತರ ಸೂಕ್ತ ಸಾಕ್ಷ್ಯ ದೊರೆಯದ ಕಾರಣ ಅವರಿಗೆ ನ್ಯಾಯಾಲಯ ಕ್ಲಿನ್ ಚಿಟ್ ನೀಡಿದೆ. ಈ ಸಂದರ್ಭದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ, ಕಸಬ್ ಪರ ವಕೀಲ ಕೆ ಪಿ ಪವಾರ್ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು. ಕಸಬ್ ವಿರುದ್ಧ 11 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು.
ಕಸಬ್ ಸೇರಿ ಲಷ್ಕರ್ ಇ ತೊಯ್ಬಾ ಸಂಘಟನೆಯಲ್ಲಿ ತರಬೇತಿ ಹೊಂದಿದ 10 ಮಂದಿ ಉಗ್ರರು ಸಮುದ್ರದ ಮೂಲಕ ಮುಂಬೈ ಪ್ರವೇಶಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿ ತಾಜ್, ಟ್ರೈಡೆಂಟ್ ಹೋಟೆಲ್ ಮತ್ತು ನಾರಿಮನ್ ಹೌಸ್ ನಲ್ಲಿ ಅಡಗಿ ಕುಳಿತಿದ್ದರು. ಅಲ್ಲಿರುವ ಜನರನ್ನು ಒತ್ತೆಯಾಳಾಗಿಸಿ ಅಮಾಯಕರನ್ನು ಹತ್ಯೆಗೈದಿದ್ದರು. ಘಟನೆಯಲ್ಲಿ ಸುಮಾರು 166 ಮಂದಿ ಸಾವನ್ನಪ್ಪಿದ್ದರು. 400 ಕ್ಕೂ ಮಂದಿ ಗಾಯಗೊಂಡಿದ್ದರು. ಭಾರತದ ಆರ್ಥಿಕತೆ ಬೀರಿದ ಈ ಘಟನೆ ಬೊಕ್ಕಸಕ್ಕೆ 4000 ಕೋಟಿ ರುಪಾಯಿ ನಷ್ಟವನ್ನುಂಟು ಮಾಡಿತ್ತು. ಉಗ್ರನನ್ನು ಸಾರ್ವಜನಿಕವಾಗಿ ಗಲ್ಲು ಶಿಕ್ಷೆ ವಿಧಿಸಬೇಕು ಎನ್ನುವುದು ವೀರ ಯೋಧರ ಕುಟುಂಬ ಸದಸ್ಯರು ಸೇರಿದಂತೆ ಸಮಸ್ತ ಭಾರತೀಯರ ಒತ್ತಾಯವಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications