ಸಂಚು ರೂಪಿಸಿದ್ದು ಬಂಗಾರಪ್ಪ, ಮಧು : ಹಾಲಪ್ಪ

ಸುವರ್ಣ ಚಾನೆಲ್ ನಲ್ಲಿ ಸಂದರ್ಶನ ನೀಡಿದ ಹಾಲಪ್ಪ, ನನ್ನ ಮೇಲೆ ಬಂದಿರುವ ಆರೋಪವೆಲ್ಲವೂ ವ್ಯವಸ್ಥಿತ ಪಿತೂರಿ. ಇದರ ಹಿಂದೆ ಸಂಚಿದೆ. ನನ್ನ ರಾಜಕೀಯ ಏಳ್ಗೆ ತಾಳಲಾರದೆ ಈ ಕೃತ್ಯವನ್ನು ಹೆಣೆಯಲಾಗಿದೆ ಎಂದರು. ಮುಖ್ಯವಾಗಿ ಸೊರಬ ವಿಧಾನಸಭೆ ಚುನಾವಣೆಯಲ್ಲಿ ಬಂಗಾರಪ್ಪ ಅವರ ಮಗ ಮಧು ಅವರನ್ನು ಸೋಲಿಸಿದ್ದೆ. ಅವರ ಆರ್ಶೀವಾದದಿಂದ ಬೆಳೆದ ನಾನು. ಇದೀಗ ನಾನು ಬಿಜೆಪಿಯಲ್ಲಿ ಸಚಿವನಾಗಿರುವುದು ಅವರಿಗೆ ಸಹಿಸಲು ಆಗುತ್ತಿಲ್ಲ. ಅಲ್ಲದೇ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತುಂಬಾ ಹತ್ತಿರವಾಗಿದ್ದು ಬಂಗಾರಪ್ಪ ಅವರು ನನ್ನ ವಿರುದ್ಧ ಕುದಿಯಲು ಕಾರಣವಾಗಿದೆ.
ನಾನು ಈಗಲೂ ಹೇಳುವೆ, ನನ್ನ ಮೇಲೆ ಬಂದಿರುವ ಆರೋಪ ಸಾಬೀತಾದರ ಜೈಲಿಗೆ ಹೋಗಲೂ ಸಿದ್ದ. ದೇಶದ ಕಾನೂನಿಗೆ ನಾನು ಹೊರತಲ್ಲ. ಇದೀಗ ತಾನೇ ಕಾನೂನು ಸಮರ ಶುರವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಹೊರಬರಲಿದೆ ಎಂದು ಹಾಲಪ್ಪ ವಿವರಿಸಿದರು. ವೆಂಕಟೇಶ್ ಮೂರ್ತಿ ಅವರ ಮನೆಗೆ ನಾನು ಹೋಗುತ್ತಿದ್ದೆ. ಆದರೆ, ಹೀಗೆ ಮಾಡಲು ಸಾಧ್ಯವೇ ಇಲ್ಲ. ರಾಜಕೀಯವಾಗಿ ನಾನು ಬೆಳೆಯಲು ಬಂಗಾರಪ್ಪ ಕಾರಣರು. ಆದರೆ, ಇಂದು ಅವರ ಮಾಡಿದ ಈ ಕೃತ್ಯದಿಂದ ನನ್ನ ಮನೆಯಲ್ಲಿದ್ದ ಅವರ ಫೋಟೋವನ್ನು ತೆಗೆದುಹಾಕಿದ್ದೇನೆ ಎಂದು ಹಾಲಪ್ಪ ಹೇಳಿದರು. ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಈ ಸಂಚಿನ ರೂವಾರಿ ಎಂದು ಹಾಲಪ್ಪ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
ಮಧು ತಿರುಗೇಟು
ನಮ್ಮ ಕುಟುಂಬದ ಮೇಲೆ ಹಾಲಪ್ಪ ಮಾಡಿರುವ ಆರೋಪ ಎಲ್ಲವೂ ಸುಳ್ಳು. ಈ ಬಗ್ಗೆ ತನಿಖೆಯಾಗಬೇಕು. ಸರಕಾರ ಈ ಬಗ್ಗೆ ಪಾರದರ್ಶಕವಾಗಿ ತನಿಖೆಯಾಗಲಿ. ಮುಖ್ಯಮಂತ್ರಿಗಳು ಈ ಕೂಡಲೇ ಪ್ರಕರಣವನ್ನು ತನಿಖೆಗೆ ವಹಿಸಬೇಕು ಎಂದು ಮಧು ಬಂಗಾರಪ್ಪ ಒತ್ತಾಯಿಸಿದರು. ನನ್ನ ತಂಟೆಗೆ ಬಂದರೆ ಹಾಲಪ್ಪನನ್ನು ಧೂಳಿಪಟ ಮಾಡುವೆ ಎಂದು ಬಂಗಾರಪ್ಪ ಭಾನುವಾರವೇ ಗುಡುಗಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications