ಸಿಐಡಿ ಪೊಲೀಸರ ಕೈಗೆ ಹಾಲಪ್ಪನ ಕಾಮಕಾಂಡ

ರಾಜ್ಯಾದ್ಯಂತ ವ್ಯಾಪಕ ಖಂಡನೆಗೆ ಆಕ್ರೋಶಕ್ಕೆ ಗುರಿಯಾಗಿರುವ ಹರತಾಳ್ ಹಾಲಪ್ಪ ಅತ್ಯಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರಲು ಈ ಕೂಡಲೇ ಸಿಐಡಿ ತನಿಖೆ ನಡೆಸಲು ಸೂಚನೆ ನೀಡಲಾಗಿದೆ ಎಂದರು. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಆರೋಪ ಬಂದ ಹಿನ್ನೆಲೆಯಲ್ಲಿ ಸಚಿವರೊಬ್ಬರು ದಿಢೀರ್ ಅಂತ ರಾಜೀನಾಮೆ ನೀಡಿರುವುದು ಇದೇ ಪ್ರಥಮ. ಹಾಲಪ್ಪ ಈ ಪ್ರಕರಣದಲ್ಲಿ ನಿರಪರಾಧಿಯಾಗಿ ಹೊರಬರಲಿದ್ದಾರೆ ಎಂದು ಅವರು ಸಮರ್ಥಿಸಿಕೊಂಡರು.
ಹಾಲಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಗೆ ತಿರುಗೇಟು ನೀಡಿದ ಈಶ್ವರಪ್ಪ, ಹಾಲಪ್ಪ ಅವರನ್ನು ಏಕೆ ಬಂಧಿಸಬೇಕು. ಆಂಧ್ರಪ್ರದೇಶದ ರಾಜ್ಯಪಾಲ ಎನ್ ಡಿ ತಿವಾರಿ ಅವರನ್ನು ಈ ಕಾಂಗ್ರೆಸ್ ಪಕ್ಷ ಬಂಧಿಸಿತ್ತೆ. ಆರೋಪ ಬಂದಿದೆ. ತನಿಖೆ ನಡೆಯಲಿ ನಂತರ ಮುಂದಿನ ಕ್ರಮಗಳ ಬಗ್ಗೆ ಯೋಚಿಸೋಣ ಎಂದು ಅವರು ಸ್ಪಷ್ಟಪಡಿಸಿದರು.












Click it and Unblock the Notifications