ಪಾಪಿ ಕಸಬ್ ಗೆ ಗಲ್ಲು ಶಿಕ್ಷೆ ಸರಿ : ಉಜ್ವಲ್ ನಿಕಂ

ಆದರೆ, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಭಾರತೀಯ ಮೂಲದ ಫಾಹೀಮ್ ಅನ್ಸಾರಿ ಮತ್ತು ಸಬಾವುದ್ಧೀನ್ ಅವರನ್ನು ಸೂಕ್ತ ಸಾಕ್ಷ್ಯ ಸಿಗದ ಕಾರಣ ನ್ಯಾಯಾಲಯ ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರುವುದಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಂ ತಿಳಿಸಿದ್ದಾರೆ.
ಮುಂಬೈ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ, ವಿಜಯ್ ಸಲಸ್ಕರ್, ಅಶೋಕ್ ಕಾಮ್ಟೆ ಹಾಗೂ ತುಕಾರಾಂ ಒಂಬ್ಳೆ ಸೇರಿ ಅನೇಕ ಯೋಧರನ್ನು ಹಾಗೂ ದಕ್ಷ ಅಧಿಕಾರಿಗಳನ್ನು ಕಸಬ್ ಕೊಂದಿರುವುದನ್ನು ಸ್ವತಃ ಅವನೇ ಒಪ್ಪಿಕೊಂಡಿದ್ದ. ಆದರೆ, ಲಷ್ಕರ್ ನಂಟು ಹಾಗೂ ಮುಂಬೈ ಭಯೋತ್ಪಾದನೆಯಲ್ಲಿ ಕೈವಾಡವಿದೆ ಎಂಬ ಆರೋಪದ ಮೇಲೆ ಫಾಹೀಮ್ ಅನ್ಸಾರಿ ಮತ್ತು ಸಬಾವುದ್ಧೀನ್ ಅವರನ್ನು ಬಂಧಿಸಲಾಗಿತ್ತು. ಸುದೀರ್ಘ ವಿಚಾರಣೆ ನಂತರ ಸೂಕ್ತ ಸಾಕ್ಷ್ಯ ದೊರೆಯದ ಕಾರಣ ಅವರಿಗೆ ನ್ಯಾಯಾಲಯ ಕ್ಲಿನ್ ಚಿಟ್ ನೀಡಿದೆ. ಈ ಸಂದರ್ಭದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಂ, ಕಸಬ್ ಪರ ವಕೀಲ ಕೆ ಪಿ ಪವಾರ್ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು. ಕಸಬ್ ವಿರುದ್ಧ 11 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು.
ಕಸಬ್ ಸೇರಿ ಲಷ್ಕರ್ ಇ ತೊಯ್ಬಾ ಸಂಘಟನೆಯಲ್ಲಿ ತರಬೇತಿ ಹೊಂದಿದ 10 ಮಂದಿ ಉಗ್ರರು ಸಮುದ್ರದ ಮೂಲಕ ಮುಂಬೈ ಪ್ರವೇಶಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿ ತಾಜ್, ಟ್ರೈಡೆಂಟ್ ಹೋಟೆಲ್ ಮತ್ತು ನಾರಿಮನ್ ಹೌಸ್ ನಲ್ಲಿ ಅಡಗಿ ಕುಳಿತಿದ್ದರು. ಅಲ್ಲಿರುವ ಜನರನ್ನು ಒತ್ತೆಯಾಳಾಗಿಸಿ ಅಮಾಯಕರನ್ನು ಹತ್ಯೆಗೈದಿದ್ದರು. ಘಟನೆಯಲ್ಲಿ ಸುಮಾರು 166 ಮಂದಿ ಸಾವನ್ನಪ್ಪಿದ್ದರು. 400 ಕ್ಕೂ ಮಂದಿ ಗಾಯಗೊಂಡಿದ್ದರು. ಭಾರತದ ಆರ್ಥಿಕತೆ ಬೀರಿದ ಈ ಘಟನೆ ಬೊಕ್ಕಸಕ್ಕೆ 4000 ಕೋಟಿ ರುಪಾಯಿ ನಷ್ಟವನ್ನುಂಟು ಮಾಡಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications