ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಂದ್ರಾವತಿ ಅವರಿಗೆ ಸೂಕ್ತ ರಕ್ಷಣೆ : ಆಚಾರ್ಯ

By Mrutyunjaya Kalmat
|
Google Oneindia Kannada News

VS Acharya
ಬೆಂಗಳೂರು, ಮೇ. 4 : ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಮ್ಮ ಮೇಲೆ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿರುವ ಚಂದ್ರಾವತಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಲಾಗುವುದು. ಜೊತೆಗೆ ಹಾಲಪ್ಪ ತಪ್ಪೇ ಮಾಡಿದ್ದಲ್ಲಿ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಈಗಾಗಲೇ ಸಿಐಡಿ ವಹಿಸಲಾಗಿದೆ. ಅಗತ್ಯ ಬಿದ್ದರೆ ಚಂದ್ರಾವತಿ ಮತ್ತವರ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡುವುದಾಗಿ ಹೇಳಿದರು. ಚಂದ್ರಾವತಿ ಅವರು ಸಚಿವ ಹಾಲಪ್ಪ ವಿರುದ್ಧ ನೀಡಿದ ದೂರನ್ನು ಶಿವಮೂಗ್ಗ ಪೊಲೀಸರು ಸ್ವೀಕರಿಸಲು ನಿರಾಕರಿಸಿದರು ಎನ್ನುವ ವಿಷಯ ತಮ್ಮ ಗಮನಕ್ಕೆ ಬಂದಿಲ್ಲ. ಭಾನುವಾರ ಚಂದ್ರಾವತಿ ಅವರು ಡಿಜಿಪಿಗೆ ದೂರು ನೀಡಿದ್ದು ತಕ್ಷಣವೇ ಡಿಜಿಪಿ ಅವರು ಈ ವಿಷಯವನ್ನು ತಮ್ಮ ಗಮನಕ್ಕೆ ತಂದರು ಎಂದು ಆಚಾರ್ಯ ವಿವರಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X