ಅತ್ಯಾಚಾರ ಪ್ರಕರಣ : ಶಿವಮೊಗ್ಗದಲ್ಲಿ ಸಿಐಡಿ ತಂಡ

ವಿಡಿಯೋ : ಮಾಧ್ಯಮದ ಮುಂದೆ ಚಂದ್ರಾವತಿ
ಸಿಐಡಿ ಡಿಐಡಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೇಣುಕಾ ಸುಕುಮಾರನ್ ನೇತೃತ್ವದ ತಂಡ ಈಗಾಗಲೇ ಶಿವಮೊಗ್ಗಕ್ಕೆ ತೆರಳಿದೆ. ಪ್ರಥಮ ಹಂತದ ತನಿಖೆ ನಂತರ ಎಲ್ಲ ಸಾಕ್ಷ್ಯಾಧಾರಗಳ ಪರೀಕ್ಷೆ ನಡೆಸಿ ಅಗತ್ಯ ಬಿದ್ದರೆ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. ಮುಖ್ಯವಾಗಿ ಅತ್ಯಾಚಾರಕ್ಕೆ ಒಳಗಾಗಿರುವ ಶಿವಮೂಗ್ಗದ ಚಂದ್ರಾವತಿ ಎಂಬ ಮಹಿಳೆ ನೀಡಿರುವ ದೂರಿನ ಆಧಾರ ಮೇಲೆ ಮಾಜಿ ಸಚಿವ ಹರತಾಳು ಹಾಲಪ್ಪ, ಬಸವರಾಜ್ ಮತ್ತು ಗಿರೀಶ್ ಎಂಬುವವರ ಮೇಲೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 376, 342, 506, 341 ಮತ್ತು 34 ಅಡಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಚರಣ್ ರೆಡ್ಡಿ ಹೇಳಿದರು.
ರಾಜ್ಯ ಸಿಐಡಿ ಇಲಾಖೆಗೆ ಇಂದು ಮಧ್ಯಾಹ್ನ ಡಿಜಿ-ಐಜಿ ಅಜಯ್ ಕುಮಾರ್ ಸಿಂಗ್ ಅವರಿಂದ ಸಿಐಡಿ ತನಿಖೆಗೆ ಆದೇಶ ಬಂದಿದೆ. ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಪ್ರಕರಣದ ತನಿಖೆಗೆ ಸಿಐಡಿ ಎಸ್ಪಿ ಲೋಕೇಶ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ರೇಣುಕಾ ಸುಕುಮಾರನ್ ನೇತೃತ್ವದ ತನಿಖಾ ತಂಡ ಶಿವಮೊಗ್ಗಕ್ಕೆ ತೆರಳಿದ್ದು, ದೂರಿನ ಪರಿಶೀಲನೆ ನಡೆಸಿ ನಂತರ ಅಪರಾಧ ನಡೆದ ಸ್ಥಳದ ಪರೀಕ್ಷೆ ನಡೆಸಲಾಗುವುದು ಎಂದು ರೆಡ್ಡಿ ವಿವರಿಸಿದರು.
ಕಳೆದ ವರ್ಷ ನವೆಂಬರ್ 26 ರಂದು ಶಿವಮೊಗ್ಗದ ವಿನೋಬಾನಗರದ ಮನೆಯೊಂದರಲ್ಲಿ ಘಟನೆ ನಡೆದಿದೆ. ವಿನೋಬಾನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ, ಬಸವರಾಜ್ ಮತ್ತು ಗಿರೀಶ್ ಎಂಬುವವ ಮೇಲೆ ದೂರು ದಾಖಲಾಗಿದೆ ಎಂದರು.
ವಿಡಿಯೋ : ಹರತಾಳು ಹಾಲಪ್ಪ ಕಾಮಕಾಂಡದ ಚಿತ್ರಣ
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪ ಬಂದ ಕೂಡಲೇ ಆರೋಪಿಯನ್ನು ಬಂಧಿಸುವುದು ಪರಿಪಾಠ. ಆದರೆ, ಹಾಲಪ್ಪ ಪ್ರಕರಣದಲ್ಲಿ ಯಾವು ಕ್ರಮ ಕೈಗೊಳ್ಳುತ್ತೀರಿ, ಅವರನ್ನು ಬಂಧಿಸದಂತೆ ರಾಜಕೀಯ ಒತ್ತಡವೇನಾದರೂ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸಿಐಡಿ ಯಾವುದೇ ಒತ್ತಡಕ್ಕೆ ಒಳಗಾಗುವುದಿಲ್ಲ. ಪ್ರಥಮ ಹಂತದ ತನಿಖೆ ನಂತರ ಅಗತ್ಯ ಬಿದ್ದರೆ ಯಾವುದೇ ಮುಲಾಜು ಇಲ್ಲದೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಚರಣ್ ರೆಡ್ಡಿ ವಿವರಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications