ಹಾಲಪ್ಪ ಪ್ರಕರಣ : ವಕೀಲರು ಏನನ್ನುತ್ತಾರೆ

ಸಚಿವ ಹಾಲಪ್ಪ ಅವರ ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಚಂದ್ರಾವತಿ ಅವರ ಪತಿ ವೆಂಕಟೇಶ್ ಮೂರ್ತಿ ಫೋನ್ ನಲ್ಲಿ ಚಿತ್ರೀಕರಿಸಿದ ದೃಶ್ಯಗಳನ್ನು ಟಿವಿಯಲ್ಲಿ ನೋಡಿದೆ. ಇದನ್ನು ನೋಡಿದ ತಕ್ಷಣ ಇದು ಬೋಗಸ್ ಎನ್ನಲು ಬಹಳ ಹೊತ್ತು ಹಿಡಿಯಲಿಲ್ಲ. ಹಾಲಪ್ಪ ಅವರನ್ನು ರಾಜಕೀಯವಾಗಿ ಹಣಿಯಲು ನಡೆಸಿದ ಕುತಂತ್ರ ಎಂದು ತಿಳಿಯುತ್ತದೆ. ನಾನು ಅನೇಕ ಅತ್ಯಾಚಾರ ಪ್ರಕರಣಗಳ ವಿಚಾರಣೆ ನಡೆಸಿದ್ದೇನೆ. ನನ್ನ ಅನುಭವದ ಆಧಾರದ ಮೇಲೆ ಹೇಳುವುದಾದರೆ ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಖ್ಯಾತ ಕ್ರಿಮಿನಲ್ ವಕೀಲ ಎಂ ಎಂ ನಾಣಯ್ಯ ಅವರ ಅಭಿಪ್ರಾಯವಾಗಿದೆ.
ಯಾವುದೇ ಘಟನೆಯ ಚಿತ್ರೀಕರಣ ಮಾಡಿರಲಿ ಅಥವಾ ದೂರವಾಣಿ ಸಂಭಾಷಣೆಯ ವಿವರ ಪಡೆದುಕೊಂಡಿರಲಿ ಅಂಥ ಪ್ರಕ್ರಿಯೆ ನಡೆದ ತಕ್ಷಣ ದಾಖಲೆಯನ್ನು ಸೀಲ್ ಮಾಡಿ ಲಕೋಟೆಯಲ್ಲಿ ಇಡಬೇಕು. ಕೂಡಲೇ ಅದನ್ನು ಕೋರ್ಟ್ ವಶಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೆ ಅದಕ್ಕೆ ಮಾನ್ಯತೆ ಇರುವುದಿಲ್ಲ ಎನ್ನುವುದು ಮಾಜಿ ಅಡ್ವೋಕೇಟ್ ಜನರಲ್ ಬಿ ವಿ ಆಚಾರ್ಯ ಅವರ ಮಾತಾಗಿದೆ.
ಇದೊಂದು ಮ್ಯಾಚ್ ಫಿಕ್ಸಿಂಗ್ ಇದ್ದಂತೆ. ಅವರು ನೀಡಿರುವ ವಿವರ ಓದಿದರೆ ಸಾಕು ಇದು ಬಹಿರಂಗಗೊಳ್ಳುತ್ತದೆ. ವೆಂಕಟೇಶ್ ಮೂರ್ತಿ ದಂಪತಿಗಳಿಗೆ ಹಾಲಪ್ಪ ಅವರನ್ನು ಸಚಿವ ಸ್ಥಾನದಿಂದ ಇಳಿಸುವ ಏಕೈಕ ಗುರಿ ಇದ್ದಿದ್ದೇ ಆದಲ್ಲಿ ಇಷ್ಟೊಂದು ನಾಟಕ ಮಾಡುವ ಅವಶ್ಯಕತೆ ಇರಲಿಲ್ಲ. ಅವರ ಪತ್ನಿಯಿಂದ ಇಂಥ ದಿನ, ಇವರಿಂದ, ಈ ರೀತಿ ಅತ್ಯಾಚಾರ ನಡೆದಿದೆ ಎಂದು ದೂರು ಕೊಟ್ಟಿದ್ದರೆ ಸಾಕಿತ್ತು ಎನ್ನುತ್ತಾರೆ ನಿತ್ಯಾನಂದನ ಪರ ವಕಾಲತ್ತು ನಡೆಸುತ್ತಿರುವ ಎಚ್ ಎಸ್ ಚಂದ್ರಮೌಳಿ ಅವರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications