ಬಿಜೆಪಿಯಿಂದ ಗ್ರಾಮ ಪಂಚಾಯತಿ ಅಪವಿತ್ರ : ಎಚ್ಡಿಕೆ

ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಿಗಾನಹಳ್ಳಿಯಲ್ಲಿ ಕುಮಾರಸ್ವಾಮಿಯವರು ಮತದಾನ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ನಾನಾಗಲೀ ಪಕ್ಷದ ವರಿಷ್ಠರಾಗಲಿ ಎಲ್ಲಿಯೂ ಚುನಾವಣಾ ಪ್ರಚಾರ ನಡೆಸಿಲ್ಲ, ಆಯಾ ಗ್ರಾಮಗಳ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರೇ ಚುನಾವಣೆ ನಡೆಸುತ್ತಿದ್ದಾರೆಂದು ಹೇಳಿದರು.
ಹಣದ ಹೊಳೆ : ಪಕ್ಷದ ವರ್ಚಸ್ಸನ್ನ ವೃದ್ದಿಸಿಕೊಳ್ಳಬೇಕೆಂಬ ಕನಸಿನಲ್ಲಿರುವ ಬಿಜೆಪಿ ಹಣದ ಹೊಳೆ ಹರಿಸಿ ಆಡಳಿತಯಂತ್ರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಗ್ರಾಮಗಳ ಮಟ್ಟದಲ್ಲೂ ರಾಜಕೀಯವನ್ನ ಕಲುಶಿತಗೊಳಿಸುತ್ತಾ ಓಟಿಗೆ ಸಾವಿರಾರು ರೂಪಾಯಿ ನೀಡಿ ಮತದಾರರನ್ನು ಖರೀದಿ ಮಾಡಲು ಮುಂದಾಗಿರುವ ಬಿಜೆಪಿಗರಿಗೆ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಸತ್ಯಾಸತ್ಯತೆ ಹೊರಬರುವುದು ಕಷ್ಟ : ಲೈಂಗಿಕ ಹಗರಣದ ಆರೋಪ ಹೊತ್ತಿರುವ ಹಾಲಪ್ಪನವರ ವಿರುದ್ದ ದೂರನ್ನು ದಾಖಲಿಸಲು ಪೊಲೀಸ್ ಇಲಾಖೆಯ ಡಿಜಿಯವರು ಒಲ್ಲದ ಮನಸ್ಸಿನಿಂದ ಸ್ವೀಕಾರ ಮಾಡಿದ್ದಾರೆ. ದೂರು ಪಡೆದ ಡಿ.ಜಿ.ಯವರು ಮುಖ್ಯಮಂತ್ರಿಗಳು ಮತ್ತು ಆರೋಪಿ ಹಾಲಪ್ಪನವರು ವಿಮಾನ ನಿಲ್ದಾಣದಲ್ಲಿ ನಡೆಸಿದ ಚರ್ಚೆಯ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ ಎಂದರು.
ಸಾಮಾನ್ಯ ಮಂದಿ ಏನಾದರೂ ತಪ್ಪು ಮಾಡಿದರೆ ತಕ್ಷಣವೇ ಕ್ರಮಕೈಗೊಳ್ಳುತ್ತಾರೆ. ಆದರೆ ಹಾಲಪ್ಪನವರ ಲೈಂಗಿಕ ಹಗರಣ ಬಹಿರಂಗವಾದಾಕ್ಷಣ ಸರ್ಕಾರವೇ ಕ್ರಮಕೈಗೊಳ್ಳಬೇಕಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಹಾಲಪ್ಪಗೆ ಸಾತ್ವಿಕ ವ್ಯಕ್ತಿ ಎಂಬ ಟೈಟಲ್ ಕೊಟ್ಟಿದ್ದಾರೆ. ಇದರಿಂದ ಹಾಲಪ್ಪನವರ ಲೈಂಗಿಕ ಹಗರಣದ ಪ್ರಕರಣದಲ್ಲಿ ನ್ಯಾಯಸಿಗಲು ಸಾಧ್ಯವೇ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ ಎಂದು ಎಚ್ಡಿಕೆ ಹೇಳಿದರು.
ರೆಸಾರ್ಟ್ ನಿರ್ಮಾಣಕ್ಕೆ ಅವಕಾಶವಿಲ್ಲ : ಐಹಾಸಿಕ ನೆಲೆಯಾಗಿರುವ ಶ್ರೀರಾಮದೇವರ ಬೆಟ್ಟದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಗೃಹಸಚಿವರೇ ಜಿಲ್ಲಾಡಳಿತಕ್ಕೆ ಒತ್ತಡ ತಂದಿದ್ದಾರೆ. ಪವಿತ್ರ ಸ್ಥಳವನ್ನ ಅಪವಿತ್ರ ಮಾಡಲು ಹೊರಟಿರುವ ಬಿಜೆಪಿ ಸರ್ಕಾರದ ಸಚಿವರುಗಳ ಕಡೆಯ ಗೂಂಡಾ ಪಡೆಯಿಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿರವುದು ಖಂಡನಾರ್ಹವೆಂದು ಹೇಳಿದರು.
ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರ ಒತ್ತಡ ಎಷ್ಟೇ ತಂದು ದಬ್ಬಾಳಿಕೆ ನಡೆಸಿ ರೆಸಾರ್ಟ್ ನಿರ್ಮಾಣಕ್ಕೆ ಮುಂದಾದರೆ ನಾನು ಸಹಿಸುವುದಿಲ್ಲ. ಪವಿತ್ರವಾದ ಸ್ಥಳದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಇನ್ನೆರಡು ದಿನಗಳಲ್ಲಿ ರೆಸಾರ್ಟ್ ನಿರ್ಮಾಣ ಮಾಡುವ ಸ್ಥಳಕ್ಕೆ ಭೇಟಿ ನೀಡಿ ಯಾವ ಗೂಂಡಾಗಳು ಬಂದು ಏನು ಮಾಡುತ್ತಾರೆಂಬುದು ನಾನು ನೋಡುತ್ತೇನೆಂದು ಸವಾಲು ಹಾಕಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications