ವಿದೇಶೀಯರ ವಲಸೆ ನಿರ್ಬಂಧಕ್ಕೆ ಬ್ರಿಟನ್ ನಿರ್ಧಾರ

ಈ ವಲಸೆ ನೀತಿಯಿಂದಾಗಿ ಬ್ರಿಟನ್ನಿಗೆ ವಲಸೆ ಬರುವ ಭಾರತೀಯ ತಂತ್ರಜ್ಞರು ಮತ್ತು ವಿದಾರ್ಥಿಗಳಿಗೆ ತೊಂದರೆ ಆಗುವುದು ಖಚಿತ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಆದರೆ, ವಲಸೆಗಾರರಿಂದ ಬ್ರಿಟನ್ ಗೆ ಅನುಕೂಲವಾಗುವಂತಿದ್ದರೆ ಮಾತ್ರ ವೀಸಾ ನೀಡಲು ಯೋಜಿಸಲಾಗಿದ್ದು, ಪ್ರತಿಭಾವಂತ ಮತ್ತು ಉತ್ತಮ ಜನರ ವಲಸೆಯನ್ನು ಪ್ರೋತ್ಸಾಹಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಬ್ರಿಟನ್ ನಲ್ಲಿ ಅಧಿಕಾರ ಹಿಡಿದಿರುವ ಕನ್ಸರ್ವೇಟಿವ್ ಮತ್ತು ಲಿಬರಲ್ ಡೆಮೊಕ್ರೆಟಿಕ್ ಪಕ್ಷಗಳ ಸಮ್ಮಿಶ್ರ ಸರ್ಕಾರ ಹೊಸ ವಲಸೆ ನೀತಿಯನ್ನು ಪ್ರಕಟಿಸಿದೆ. ಯೂರೋಪಿಯನ್ ಯೂನಿಯನ್ ನಿಂದ ಹೊರಗಿರುವ ರಾಷ್ಟ್ರಗಳ ನಾಗರಿಕರಿಗೆ ವಾರ್ಷಿಕ ಮಿತಿ ಹೇರಲು ಯೋಜಿಸಲಾಗಿದೆ.
ಲಿಬರಲ್ ಡೆಮೊಕ್ರೆಟಿಕ್ ಪಕ್ಷದ ವಲಸೆ ನೀತಿಯ ಪ್ರಕಾರ ಅಕ್ರಮ ವಲಸೆಗಾರರಿಗೆ ನೀಡಲಾಗಿದ್ದ 10 ವರ್ಷಗಳ ಕ್ಷಮೆಯನ್ನು ಕೈಬಿಟ್ಟಿದೆ. ಕನ್ಸರ್ವೆಟಿವ್ ಪಕ್ಷದ ವಲಸೆ ನೀತಿ ಪ್ರಕಾರ ವಲಸಿಗರ ಸಂಖ್ಯೆಯನ್ನು 1990ರ ಮಟ್ಟಕ್ಕೆ ಇಳಿಸಲಿದೆ. ವಲಸಿಗರಿಂದ ಸ್ಥಳೀಯರಿಗೆ ಹಾಗೂ ಸಾರ್ವಜನಿಕ ಸೇವೆಗಳ ಮೇಲೆ ಆಗುತ್ತಿರುವ ಪರಿಣಾಮವನ್ನು ಗಮನದಲ್ಲಿರಿಸಿಕೊಂಡು ವಲಸಿಗರಿಗೆ ವಾರ್ಷಿಕ ಮಿತಿ ಹೇರಲಿರುವದಾಗಿ ಪ್ರಕಟಿಸಿದೆ.
ಈ ವಲಸೆ ಮಿತಿ ಪ್ರತೀ ವರ್ಷವೂ ಬದಲಾಗಲಿದೆ ಎಂದು ಹೇಳಲಾಗಿದೆ. ಹೊಸ ವಲಸೆ ನೀತಿಯಲ್ಲಿ ವಿದ್ಯಾರ್ಥಿಗಳ ವೀಸಾ ನಿಯಮಾವಳಿಗಳನ್ನು ಬಿಗಿಗೊಳಿಸಲಾಗಿದೆ. ಯೂರೋಪಿಯನ್ ಯೂನಿಯನ್ ಹೊರಗಿನ ದೇಶಗಳಿಂದ ಮದುವೆ ಮಾಡಿಕೊಳ್ಳಲು ವಲಸೆ ಬರುವ ಎಲ್ಲರಿಗೂ ಇಂಗ್ಲಿಷ್ ಭಾಷೆ ಗೊತ್ತಿದ್ದರೆ ಮಾತ್ರ ವೀಸಾ ನೀಡಲು ನಿರ್ಧರಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications