12 ಸಾವಿರ ಹಳ್ಳಿಗಳಿಗೆ ಎಸ್ ಬಿಐ ಜಾಲ ವಿಸ್ತರಣೆ

ರಿಸರ್ವ್ ಬ್ಯಾಂಕು ಈ ಹಿಂದೆ ಎಲ್ಲಾ ಬ್ಯಾಂಕ್ ಗಳೂ ತಮ್ಮ ಆಡಳಿತ ಮಂಡಳಿಯಿಂದ ಅನುಮೋದನೆಗೊಂಡ ಯೋಜನೆಗಳನ್ನು ಹಾಗೂ ಬ್ಯಾಂಕ್ ಇಲ್ಲದ ಸ್ಥಳಗಳಿಗೆ ಬ್ಯಾಂಕ್ ಸೇವೆ ನೀಡುವ ಯೋಜನೆಯನ್ನೂ ಸಲ್ಲಿಸುವಂತೆ ಕೋರಿತ್ತು. ದೇಶದಲ್ಲಿರುವ 6 ಲಕ್ಷ ಹಳ್ಳಿಗಳಲ್ಲಿ, 2,000ಕ್ಕಿಂತ ಅಧಿಕ ಜನಸಂಖ್ಯೆ ಹೊಂದಿರುವ 64,000 ಹಳ್ಳಿಗಳಲ್ಲಿ ಸರಿಯಾದ ಬ್ಯಾಂಕಿಂಗ್ ಸೌಲಭ್ಯಗಳಿಲ್ಲ. ಎಸ್ ಬಿಐ ನ ಉದ್ದೇಶಿತ ಬ್ಯಾಂಕಿಂಗ್ ಯೋಜನೆ ಅದಕ್ಕೆ ಕಷ್ಟವಾಗಲಾರದು.
ಏಕೆಂದರೆ ಎಸ್ ಬಿಐ ಈಗಾಗಲೇ ಬ್ಯಾಂಕಿಂಗ್ ಸವಲತ್ತು ಇಲ್ಲದ 1 ಲಕ್ಷ ಹಳ್ಳಿಗಳಿಗೆ ಬ್ಯಾಂಕಿಂಗ್ ಸೇವೆ ಒದಗಿಸುವಲ್ಲಿ ಸಫಲವಾಗಿದೆ. ಉದ್ದೇಶಿತ ಯೋಜನೆಯಲ್ಲಿ ಎಸ್ ಬಿಐ 512 ಹಳ್ಳಿಗಳಲ್ಲಿ ನೂತನವಾಗಿ ಬ್ಯಾಂಕ್ ಶಾಖೆ ತೆರೆಯಲಿದ್ದು, ಇತರ ಹಳ್ಳಿಗಳಲ್ಲಿ ವ್ಯಾಪಾರಿ ಬಾತ್ಮೀದಾರರ ಮೂಲಕ ಬ್ಯಾಂಕಿಂಗ್ ಸೇವೆ ನೀಡಲಿದೆ. ಈ ಸೇವೆ ಬಳಸಿಕೊಳ್ಳುವ ಗ್ರಾಹಕರು ಶುಲ್ಕ ನೀಡಬೇಕಾಗುತ್ತದೆ ಎಂದು ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಬ್ಯಾಂಕ್ ಆಫ್ ಇಂಡಿಯಾ ಜಾಲ ವಿಸ್ತರಣೆ: ಸಾರ್ವಜನಿಕ ರಂಗದ ಇತರ ಬ್ಯಾಂಕ್ ಗಳೂ ತಮ್ಮ ವ್ಯವಹಾರ ವಿಸ್ತರಣೆಗೆ ಮುಂದಾಗಿವೆ. ಬ್ಯಾಂಕ್ ಆಫ್ ಇಂಡಿಯಾ ಮುಂದಿನ ಮೂರು ವರ್ಷಗಳಲ್ಲಿ 7000 ಹಳ್ಳಿಗಳಿಗೆ ಬ್ಯಾಂಕಿಂಗ್ ಸೇವೆ ಒದಗಿಸಲು ಮುಂದಾಗಿದ್ದು ಇದರಲ್ಲಿ 2100 ಹಳ್ಳಿಗಳಿಗೆ ಮಾರ್ಚ್ 2011 ರ ಒಳಗೆ ಸೇವೆ ನೀಡಲಿದೆ. ಬ್ಯಾಂಕ್ ಆಫ್ ಬರೋಡ ಕೂಡ 2,000 ಕ್ಕಿಂತ ಅಧಿಕ ಜನಸಂಖ್ಯೆ ಇರುವ 3000 ಹಳ್ಳಿಗಳಿಗೆ ಬ್ಯಾಂಕಿಂಗ್ ಸೇವೆ ನೀಡಲು ಮುಂದಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕೂಡ 4,500 ಹಳ್ಳಿಗಳಿಗೆ ವಾರಕ್ಕೊಂದು ಬಾರಿ ಬ್ಯಾಂಕಿಂಗ್ ಸೇವೆ ನೀಡಲು ಯೋಜನೆ ಹಾಕಿಕೊಂಡಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications