ರಾಜ್ಯ ಕೋರ್ಟ್ ತಪ್ಪೆಸಗಿದೆ ಜಯಾ ವಾದ

1997ರ, ಜೂ.5ರಂದು ದೂರಿನ ಬಗ್ಗೆ ಕ್ರಮ ಕೈಗೊಂಡು ವಿಚಾರಣಾಧೀನ ನ್ಯಾಯಾಲಯವು ನೀಡಿದ್ದ ಆದೇಶವನ್ನು ಎತ್ತಿಹಿಡಿಯುವಾಗ ಕರ್ನಾಟಕ ಉಚ್ಚ ನ್ಯಾಯಾಲಯವು ತಪ್ಪೆಸಗಿದೆ ಎಂಬ ಜಯಲಲಿತಾರ ವಾದವನ್ನು ನ್ಯಾಯಮೂರ್ತಿಗಳಾದ ಬಿ. ಸುದರ್ಶನ ರೆಡ್ಡಿ ಮತ್ತು ಎಸ್.ಎಸ್. ನಿಜಾರ್ ಪೀಠವು ತಿರಸ್ಕರಿಸಿತು.
14 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದಲ್ಲಿ ತಡೆಯಾಜ್ಞೆ ನೀಡಲು ಮಾ.19ರಂದು ನಿರಾಕರಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಜಯಲಲಿತಾರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದ ನಂತರ 42 ಸಾಕ್ಷಿಗಳ ಪಾಟೀ ಸವಾಲಿಗೆ ಕಾಲಮಿತಿಯನ್ನು ನಿಗದಿಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಆದೇಶ ನೀಡಿತ್ತು. ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಚ್ 10ರ ಆದೇಶವನ್ನು ಪ್ರಶ್ನಿಸಿ ಜಯಲಲಿತಾ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು.












Click it and Unblock the Notifications