ವಿಶ್ವನಾಥನ್ ಆನಂದ್ ಗೆ ವಿಶ್ವ ಚೆಸ್ ಮುಕುಟ

6.5 ಪಾಯಿಂಟ್ ಗಳಿಸಿದ್ದ 40ರ ಹರೆಯದ ಆನಂದ್ ಮಂಗಳವಾರ ನಡೆದ ಅಂತಿಮ ಹಣಾಹಣಿಯಲ್ಲಿ ಬಲ್ಗೇರಿಯಾದ ಗ್ರಾಂಡ್ ಮಾಸ್ಟರ್ ವೆಸೆಲಿನ್ ಟೊಪಲೋವ್( 5.5 ಪಾಯಿಂಟ್) ಅವರನ್ನು ಸೋಲಿಸಿದರು. ಇದಕ್ಕೂ ಮೊದಲು ಈ ಇಬ್ಬರು ಆಟಗಾರರೂ ಕೂಡಾ 5.5 ಪಾಯಿಂಟ್ ಗಳೊಂದಿಗೆ ಫೈನಲ್ ತಲುಪಿದ್ದರು. ಹಾಗಾಗಿ ಸಮಬಲದ ಹೋರಾಟದ ನಿರೀಕ್ಷೆಯಿತ್ತು.
ಆದರೆ, ಕಪ್ಪುಕಾಯಿಗಳಿಂದ ಆಡಿದ ಆನಂದ್ ವಿರುದ್ಧ ಬಲ್ಗೇರಿಯಾದ ಆಟಗಾರ 56 ನೇ ನಡೆಯ ನಂತರ ಸೊಲೊಪ್ಪಿಕೊಂಡರು. ಈ ಚಾಂಪಿಯನ್ಶಿಪ್ 12 ಪಂದ್ಯಗಳನ್ನು ಒಳಗೊಂಡಿತ್ತು. ಆನಂದ್ ಎರಡು, ಮೂರು ಹಾಗೂ 12ನೇ ಪಂದ್ಯವನ್ನು ಗೆದ್ದುಕೊಂಡಿದ್ದರು. ಒಂದು ಹಾಗೂ ಎಂಟನೇ ಪಂದ್ಯ ಟಪಲೋವ್ ಪಾಲಾಗಿತ್ತು. ಉಳಿದ ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದ್ದವು.
2000ರಲ್ಲಿ ಟೆಹರಾನ್ ನಲ್ಲಿ ಮೊದಲ ಬಾರಿ ವಿಶ್ವ ಚಾಂಪಿಯನ್ ಕಿರೀಟ ಧರಿಸಿದ್ದ ಆನಂದ್ ನಂತರ 2007ರಲ್ಲೂ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದರು. 2008ರಲ್ಲಿ ರಷ್ಯಾದ ಗ್ರ್ಯಾಂಡ್ ಮಾಸ್ಟರ್ ವ್ಲಾಡಿಮಿರ್ ಕ್ರಾಮ್ನಿಕ್ ಅವರನ್ನು ಮಣಿಸಿ ವಿಶ್ವ ಚಾಂಪಿಯನ್ ಆಗಿ ಭಾರತಕ್ಕೆ ಕೀರ್ತಿ ತಂದಿದ್ದರು. ಐಸ್ ಲ್ಯಾಂಡ್ ನಲ್ಲಿ ಜ್ವಾಲಾಮುಖಿಯಿಂದ ಉಂಟಾಗಿದ್ದ ಬೂದಿ ಮೋಡದ ಕಾರಣ ಆನಂದ್, ಸೋಫಿಯಾ ನಗರಕ್ಕೆ ಸರಿಯಾದ ಸಮಯಕ್ಕೆ ತೆರಳಲು ಸಾಧ್ಯವಾಗದೆ ರಸ್ತೆ ಮೂಲಕ ವಾಹನದಲ್ಲಿ ಸತತ 40 ಗಂಟೆ ಪ್ರಯಾಣಿಸಿ ತಲುಪಿದ್ದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications