46.1 : ಕೊತಕೊತ ಕುದಿಯುತ್ತಿರುವ ಗುಲಬರ್ಗ

ಜಿಲ್ಲೆಯಲ್ಲಿ ತಾಪಮಾನ ದಿನೇದಿನೇ ಏರುತ್ತಿರುವ ಕಾರಣ ಜನರು ಬಿಸಿಲಿನಲ್ಲಿ ಹೆಚ್ಚು ಓಡಾಡಬಾರದು ಮತ್ತು ಶುದ್ಧವಾದ ನೀರನ್ನು ಕುಡಿಯಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್ ವಿಶಾಲ್ ಅವರು ಸಾರ್ವಜನಿಕರನ್ನು ಕೋರಿದ್ದಾರೆ. ಮಕ್ಕಳು ಮತ್ತು ವಯೋವೃದ್ಧರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕೆಂದೂ ಅವರು ಆಗ್ರಹಿಸಿದ್ದಾರೆ. ಇದಲ್ಲದೆ ಜಿಲ್ಲಾಡಳಿತದಿಂದ ಸಾಕಷ್ಟು ಪ್ರಮಾಣದಲ್ಲಿ ಓ.ಆರ್.ಎಸ್. ಹಾಗೂ ಅಗತ್ಯ ಔಷಧಿಗಳನ್ನು ಎಲ್ಲಾ ಸರಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಕಾಯ್ದಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಿಸಿಲಿನ ಝಳದಿಂದಾಗಿ ಗುಲಬರ್ಗಾದಲ್ಲಿ ಇಬ್ಬರು ಮತ್ತು ಬೀದರ್ ಜಿಲ್ಲೆಯಲ್ಲಿ ಒಬ್ಬ ಸಾವಿಗೀಡಾಗಿದ್ದಾರೆ. ನೀರಿನ ಕೊರತೆ ಕೂಡ ಜನರನ್ನು ಬಾಧಿಸುತ್ತಿದ್ದು ಶುದ್ಧವಾದ ನೀರು ದೊರೆಯದೆ ಜನ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ.
ಎಲ್ಲೆಡೆಯೂ ಇದೇ ಕಥೆ : ಉಳಿದಂತೆ ರಾಜ್ಯದಲ್ಲಿ ಬಹುತೇಕ ಒಣ ಹವೆ ಮುಂದುವರೆದಿದೆ. ಅನೇಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಹೆಚ್ಚು ಉಷ್ಣಾಂಶ ಕಂಡುಬಂದಿದೆ. ಕರಾವಳಿಯಲ್ಲೂ ಇದೇ ಹವಾಗುಣ. ಉತ್ತರ ಕರ್ನಾಟಕದಲ್ಲೂ ಇದೇ ಸ್ಥಿತಿ ಮುಂದುವರೆದಿದೆ. ಆದರೆ, ಲಭ್ಯವಾಗಿರುವ ಮುನ್ಸೂಚನೆಗಳ ಪ್ರಕಾರ ಬೀದರ್, ಗುಲಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಬೀಳಬಹುದೆಂದು ಹವಾಮಾನ ಇಲಾಖೆ ಅಂದಾಜಿಸಿದೆ. ಏರುತ್ತಿರುವ ಬಿಸಿಲಿಗೆ ಬಸವಳಿದಿರುವ ಜನ ಮಳೆಯ ಹನಿಗಾಗಿ ಕಾದು ಕುಳಿತಿದ್ದಾರೆ.
ದಕ್ಷಿಣ ಒಳನಾಡಿನಲ್ಲಿ ವಿಪರೀತ ಸೆಖೆ ಇದ್ದರೂ ಸಹ ಕೆಲವು ಕಡೆ ಮಳೆ ಆಗಿದೆ. ಇನ್ನೂ ಕೆಲವು ಕಡೆ ಬೀಳುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ನಿನ್ನೆ, ಗುರುವಾರ ಸಂಜೆ ಒಳ್ಳೆ ಮಳೆ ಬಿದ್ದಿದೆ. ಆನೇಕಲ್ಲಿನಲ್ಲಿ 3 ಸೆಂಮೀ, ಬೆಂಗಳೂರು ಮತ್ತು ಸಿರಾದಲ್ಲಿ ತಲಾ 2 ಸೆಂಮಿ ಮಳೆ ಆಗಿದೆ. ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಇತ್ತು.
ಮುನ್ಸೂಚನೆಯಂತೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ರಾತ್ರಿ ವೇಳೆಗೆ ಕೆಲವು ವಾರ್ಡುಗಳಲ್ಲಿ ಮಳೆ ಬರುವ ನೀರೀಕ್ಷೆಯಿದೆ. ಮೋಂಬತ್ತಿ ಸ್ಟಾಕು ಇದೆಯಾ? ಈಗಲೇ ನೋಡಿಟ್ಟುಕೊಳ್ಳುವುದು ಒಳಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications