46.1 : ಕೊತಕೊತ ಕುದಿಯುತ್ತಿರುವ ಗುಲಬರ್ಗ

ಜಿಲ್ಲೆಯಲ್ಲಿ ತಾಪಮಾನ ದಿನೇದಿನೇ ಏರುತ್ತಿರುವ ಕಾರಣ ಜನರು ಬಿಸಿಲಿನಲ್ಲಿ ಹೆಚ್ಚು ಓಡಾಡಬಾರದು ಮತ್ತು ಶುದ್ಧವಾದ ನೀರನ್ನು ಕುಡಿಯಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್ ವಿಶಾಲ್ ಅವರು ಸಾರ್ವಜನಿಕರನ್ನು ಕೋರಿದ್ದಾರೆ. ಮಕ್ಕಳು ಮತ್ತು ವಯೋವೃದ್ಧರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕೆಂದೂ ಅವರು ಆಗ್ರಹಿಸಿದ್ದಾರೆ. ಇದಲ್ಲದೆ ಜಿಲ್ಲಾಡಳಿತದಿಂದ ಸಾಕಷ್ಟು ಪ್ರಮಾಣದಲ್ಲಿ ಓ.ಆರ್.ಎಸ್. ಹಾಗೂ ಅಗತ್ಯ ಔಷಧಿಗಳನ್ನು ಎಲ್ಲಾ ಸರಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಕಾಯ್ದಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಿಸಿಲಿನ ಝಳದಿಂದಾಗಿ ಗುಲಬರ್ಗಾದಲ್ಲಿ ಇಬ್ಬರು ಮತ್ತು ಬೀದರ್ ಜಿಲ್ಲೆಯಲ್ಲಿ ಒಬ್ಬ ಸಾವಿಗೀಡಾಗಿದ್ದಾರೆ. ನೀರಿನ ಕೊರತೆ ಕೂಡ ಜನರನ್ನು ಬಾಧಿಸುತ್ತಿದ್ದು ಶುದ್ಧವಾದ ನೀರು ದೊರೆಯದೆ ಜನ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ.
ಎಲ್ಲೆಡೆಯೂ ಇದೇ ಕಥೆ : ಉಳಿದಂತೆ ರಾಜ್ಯದಲ್ಲಿ ಬಹುತೇಕ ಒಣ ಹವೆ ಮುಂದುವರೆದಿದೆ. ಅನೇಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಹೆಚ್ಚು ಉಷ್ಣಾಂಶ ಕಂಡುಬಂದಿದೆ. ಕರಾವಳಿಯಲ್ಲೂ ಇದೇ ಹವಾಗುಣ. ಉತ್ತರ ಕರ್ನಾಟಕದಲ್ಲೂ ಇದೇ ಸ್ಥಿತಿ ಮುಂದುವರೆದಿದೆ. ಆದರೆ, ಲಭ್ಯವಾಗಿರುವ ಮುನ್ಸೂಚನೆಗಳ ಪ್ರಕಾರ ಬೀದರ್, ಗುಲಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಬೀಳಬಹುದೆಂದು ಹವಾಮಾನ ಇಲಾಖೆ ಅಂದಾಜಿಸಿದೆ. ಏರುತ್ತಿರುವ ಬಿಸಿಲಿಗೆ ಬಸವಳಿದಿರುವ ಜನ ಮಳೆಯ ಹನಿಗಾಗಿ ಕಾದು ಕುಳಿತಿದ್ದಾರೆ.
ದಕ್ಷಿಣ ಒಳನಾಡಿನಲ್ಲಿ ವಿಪರೀತ ಸೆಖೆ ಇದ್ದರೂ ಸಹ ಕೆಲವು ಕಡೆ ಮಳೆ ಆಗಿದೆ. ಇನ್ನೂ ಕೆಲವು ಕಡೆ ಬೀಳುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ನಿನ್ನೆ, ಗುರುವಾರ ಸಂಜೆ ಒಳ್ಳೆ ಮಳೆ ಬಿದ್ದಿದೆ. ಆನೇಕಲ್ಲಿನಲ್ಲಿ 3 ಸೆಂಮೀ, ಬೆಂಗಳೂರು ಮತ್ತು ಸಿರಾದಲ್ಲಿ ತಲಾ 2 ಸೆಂಮಿ ಮಳೆ ಆಗಿದೆ. ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಇತ್ತು.
ಮುನ್ಸೂಚನೆಯಂತೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ರಾತ್ರಿ ವೇಳೆಗೆ ಕೆಲವು ವಾರ್ಡುಗಳಲ್ಲಿ ಮಳೆ ಬರುವ ನೀರೀಕ್ಷೆಯಿದೆ. ಮೋಂಬತ್ತಿ ಸ್ಟಾಕು ಇದೆಯಾ? ಈಗಲೇ ನೋಡಿಟ್ಟುಕೊಳ್ಳುವುದು ಒಳಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications