ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಟ್ಟಿನಲ್ಲಿ ನಾನು ಸೋತಿರುವೆ : ಡಿ ಕೆ ಶಿವಕುಮಾರ್

By Mrutyunjaya Kalmat
|
Google Oneindia Kannada News

ಬೆಂಗಳೂರು, ಮೇ. 14 : ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ತಂದು ಕೊಡಲಾಗಲಿಲ್ಲ ಎನ್ನುವ ಬೇಸರ ನನ್ನನ್ನು ಕಾಡುತ್ತಿದೆ. ನಾನು ಮಾಡಿರುವ ತಪ್ಪುಗಳೇ ಇದಕ್ಕೆ ಕಾರಣವಿರಬಹುದು. ಎಲ್ಲಾ ತಪ್ಪು ನನ್ನಿಂದಲೇ ಆಗಿದೆ. ಆ ಬಗ್ಗೆ ನನಗೆ ತೀವ್ರ ನೋವು ಮತ್ತು ಬೇಸರವಿದೆ. ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷನಾಗಿ ವರಿಷ್ಠರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ನನ್ನಿಂದ ಸಾಧ್ಯವಾಗಲಿಲ್ಲ ಎಂದು ಡಿ ಕೆ ಶಿವಕುಮಾರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾರ್ಯಾಧ್ಯಕ್ಷನಾಗಿ ಯಾವ ರೀತಿ ಕೆಲಸ ಮಾಡಬೇಕೆಂದು ಮತ್ತು ಪಕ್ಷದ ಸಂಘಟನೆ ಹೇಗೆ ನಡೆಸಬೇಕೆಂದು ಮೊದಲೇ ಯೋಜನೆ ಸಿದ್ದಪಡಿಸಿಕೊಂಡಿದ್ದೆ. ಆದರೆ ಆ ಯೋಜನೆ ಕಾರ್ಯರೂಪಕ್ಕೆ ಬರಲಿಲ್ಲ ಎಂದರು. ನನ್ನ ಶಕ್ತಿಯನ್ನು ಸಂಪೂರ್ಣವಾಗಿ ಧಾರೆ ಎರೆಯಲು ಆಗಲಿಲ್ಲ. ಫಲಿತಾಂಶ ಆಧಾರಿತ ನಾಯಕ ನಾನಾಗಲಿಲ್ಲ, ಒಟ್ಟಿನಲ್ಲಿ ನಾನು ವಿಫಲನಾದೆ ಎಂದು ಡಿಕೆಶಿ ಆತ್ಮಾವಲೋಕನ ಮಾಡಿಕೊಂಡಿದ್ದಾರೆ.

ನನ್ನ ಮತ್ತು ಅಧ್ಯಕ್ಷರ ನಡುವೆ ಹೊಂದಾಣಿಕೆ ಇರಲಿಲ್ಲ ಎನ್ನುವ ಮಾತು ನಿರಾಧಾರಿತ. ದೇಶಪಾಂಡೆ ವಹಿಸಿದ ಕೆಲಸವನ್ನು ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಯುವ ಚುನಾವಣೆಯಲ್ಲಿ ಸ್ಪರ್ಧಿಸಬೇಕೆನ್ನುವ ಇಚ್ಛೆ ನನಗಿಲ್ಲ. ನನ್ನನ್ನು ಈ ಸ್ಥಾನಕ್ಕೆ ನೇಮಕ ಮಾಡಿದವರು ಸೋನಿಯಾ ಮೇಡಂ. ಅವರು ಎಲ್ಲಿಯವರೆಗೆ ಇಟ್ಟಿರುವವರೋ ಅಲ್ಲಿಯವರೆಗೆ ಈ ಹುದ್ದೆಯಲ್ಲಿ ಇರುತ್ತೇನೆ ಎಂದು ಶಿವಕುಮಾರ್ ಹೇಳಿದರು. ಆದರೆ ತಾನಾಗಿ ಹುದ್ದೆಯಿಂದ ನಿರ್ಗಮಿಸುವುದಿಲ್ಲ ಎನ್ನುವ ಸುಳಿವನ್ನು ಅವರು ನೀಡಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X