ಆಸ್ಪತ್ರೆಗಳಿಂದ ಮಕ್ಕಳ ಅಕ್ರಮ ಮಾರಾಟ

ಅಕ್ರಮ ಸಂಬಂಧದಿಂದಾಗಲಿ, ಇನ್ನಾವುದೋ ಕಾರಣದಿಂದಾಗಿ ಹೆತ್ತಮ್ಮನಿಗೆ ಬೇಡವಾದ ಮಗುವನ್ನು ಆಸ್ಪತ್ರೆ ದತ್ತು ಸಂಘಟನಾ ಸಂಸ್ಥೆಗೆ ನೀಡಬೇಕು. ಮಕ್ಕಳಾಗದ ಪಾಲಕರು ಈ ಸಂಸ್ಥೆಯಿಂದ ಮಕ್ಕಳನ್ನು ದತ್ತು ಪಡೆಯಬಹುದು. ಆದರೆ ಇತ್ತೀಚಿನ ದಿನಗಳಲ್ಲಿ ಈ ಸಂಸ್ಥೆಗೆ ಪರಿತ್ಯಕ್ತ ಮಕ್ಕಳು ಬರುವುದೇ ನಿಂತಿದೆ.
ಮಕ್ಕಳನ್ನು ಅಕ್ರಮವಾಗಿ ಆಸ್ಪತ್ರೆಗಳೇ ಪಾಲಕರಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಕರ್ನಾಟಕ ಮಕ್ಕಳ ಹಿತರಕ್ಷಣಾ ಆಯೋಗಕ್ಕೆ ದೂರುಗಳು ಬಂದಿವೆ. ಹಿಂದೂ ದತ್ತು ಮತ್ತು ಪಾಲನಾ ಕಾಯ್ದೆ, 1956ರ ಅಡಿಯಲ್ಲಿ ನಿಯಮಗಳನ್ನು ಪಾಲಿಸದಿರುವ ಆಸ್ಪತ್ರೆಗಳ ಮೇಲೆ ಕ್ರಮ ಜರುಗಿಸಬೇಕೆಂದು ದತ್ತು ಸಂಘಟನಾ ಸಂಸ್ಥೆ ಸರಕಾರವನ್ನು ಕೇಳಿಕೊಂಡಿದೆ.
ಆಸ್ಪತ್ರೆ ಮಾತ್ರವಲ್ಲ, ಆಸ್ಪತ್ರೆಯಿಂದ ನೇರವಾಗಿ ಮಗುವನ್ನು ಕೊಳ್ಳುವ ಪಾಲಕರು ಕೂಡ ಮಗುವನ್ನು ಅಪಹರಿಸಿದ ಆರೋಪಕ್ಕೆ ಗುರಿಯಾಗುತ್ತಾರೆ. ಕುಟುಂಬದಲ್ಲಿ ಆಂತರಿಕವಾಗಿ ದತ್ತು ಪಡೆಯುವಾಗಲೂ ಕೂಡ ಮಕ್ಕಳ ಕಲ್ಯಾಣ ಸಮಿತಿಯಿಂದ ಅನುಮತಿ ಪಡೆಯದೆ ದತ್ತು ನೀಡುವಂತಿಲ್ಲ.
ಬೆಂಗಳೂರಿನಲ್ಲಿ ಮಾತ್ರವಲ್ಲ ಉಡುಪಿಯಲ್ಲಿಯೂ ಇಂಥ ಪ್ರಕರಣಗಳು ಜರುಗಿವೆ. ದತ್ತು ಸ್ವೀಕರಣಾ ಪ್ರಕ್ರಿಯೆ ಕೂಡ ಅತ್ಯಂತ ಸುದೀರ್ಘವಾಗಿರುವುದು ಪಾಲಕರು ಮತ್ತು ಆಸ್ಪತ್ರೆಗಳು ಕಳ್ಳದಾರಿ ಹಿಡಿಯಲು ಪ್ರೋತ್ಸಾಹಿಸುತ್ತಿವೆ. ಒಂದು ಮಗು ದತ್ತು ಸ್ವೀಕಾರಕ್ಕೆ ಅರ್ಹವಾಗಲು ಕನಿಷ್ಠ ಎರಡು ವರ್ಷಗಳೇ ಬೇಕು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications