ಬಿಬಿಎಂಪಿ 24/7 ಸೇವೆ ಮೇಯರ್ ಅಭಯ

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಾಲಿಕೆಯ 198 ವಾರ್ಡ್ ಗಳಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಎಲ್ಲ ವಲಯಗಳಲ್ಲೂ 24 ಗಂಟೆ ಸೇವೆಯ ಪೂರ್ಣಕಾಲಿಕ ನಿಯಂತ್ರಣ ಕೊಠಡಿ, ನಾಗರಿಕ ಸೇವಾ ಸೌಲಭ್ಯ, ಸಂಪರ್ಕ ಬಂಧು, ತುರ್ತು ಪರಿಹಾರ ಪಡೆಗಳ ನಿಯೋಜನೆ ಮಾಡಲಾಗಿದೆ ಎಂದರು.
ಅತಿಸೂಕ್ಷ್ಮ ಪ್ರದೇಶಗಳಲ್ಲಿ ಸಂಭವಿಸಬಹುದಾದ ಅನಾಹುತಗಳ ನಿಯಂತ್ರಣಕ್ಕೆ ಸೂಚನಾಫಲಕ ಅಳವಡಿಸುವುದು. ಪ್ರವಾಹ ನಿಯಂತ್ರಣದಲ್ಲಿ ಕರ್ತವ್ಯ ನಿರ್ವಹಿಸುವ ಪಾಲಿಕೆ ಅಧಿಕಾರಿಗಳ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನದ ನೀಡುವುದು. ಎಲ್ಲ ವಲಯ ಮಟ್ಟದಲ್ಲಿ ಅಗತ್ಯವಾದ ಪರಿಹಾರ ಸಾಮಗ್ರಿಗಳನ್ನು ಮುಂಚಿತವಾಗಿ ಸಂಗ್ರಹಿಸಿಟ್ಟುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಮಳೆಗಾಲದಲ್ಲಿ ಎದುರಾಗುವ ಅವಘಡಗಳನ್ನು ತಪ್ಪಿಸಲು 10 ಪ್ರಹಾರ ದಳಗಳನ್ನು ನಿಯೋಜಿಸಲಾಗಿದೆ. ಪ್ರತಿ ವಾರ್ಡಿನಲ್ಲಿ ಒಂದು ಟ್ರ್ಯಾಕ್ಟರ್ ಮತ್ತು 10 ಮಂದಿ ಸಿಬ್ಬಂದಿಗಳ ಸರ್ವಸನ್ನದ್ದರಾಗಿರುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ಅವಶ್ಯಕತೆ ಬಿದ್ದರೆ ಹೊರಗುತ್ತಿಗೆಯಿಂದ ಸಿಬ್ಬಿಂದಿ ನೇಮಕ ಮಾಡಿಕೊಳ್ಳಲು ಕಾರ್ಯಪಾಲಕ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳಿಗೆ ತಿಳಿಸಲಾಗಿದೆ ಎಂದು ನಟರಾಜ್ ವಿವರಿಸಿದರು.
ಸಾರ್ವಜನಿಕರು ಕುಂದುಕೊರತೆಗಳಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳ ವಿವರ:
* ಕೇಂದ್ರ ಕಚೇರಿ-(080) 22221188, 22975595, 22100031, 32333435
* ಆರೋಗ್ಯ ನಿಯಂತ್ರಣ ಕಚೇರಿ- 22975585
* ಪೂರ್ವ ವಲಯ- 22979803
* ಪಶ್ಚಿಮ ವಲಯ- 23561692
* ದಕ್ಷಿಣ ವಲಯ- 26566362
* ರಾಜರಾಜೇಶ್ವರಿ ನಗರ ವಲಯ- 28600954
* ಬೊಮ್ಮನಹಳ್ಳಿ ವಲಯ- 25735642
* ಮಹದೇವಪುರ ವಲಯ- 28512301
* ಬ್ಯಾಟರಾಯನಪುರ ವಲಯ- 23638667
* ದಾಸರಹಳ್ಳಿ ವಲಯ- 28394909
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications