ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ಇಳಿಕೆ

ಇದರ ಪರಿಣಾಮವೇ, ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಕುಸಿದಿರುವುದು. ಜೋಬಲ್ಲಿ ದುಡ್ಡಿದ್ದೆ ಮಾತ್ರ ಕೊಳ್ಳುವುದು, ಇಲ್ಲದಿದ್ದರೆ ಸುಮ್ಮನಿದ್ದುಬಿಡೋಣ ಎಂಬ ಮಂತ್ರ ಜಪಿಸುತ್ತಿದ್ದಾರೆ. ಅನಗತ್ಯವಾಗಿ ಕ್ರೆಡಿಟ್ ಕಾರ್ಡ್ ಬಳಸಿ ಸಾಲ ತಲೆಯ ಮೇಲೆ ಎಳೆದುಕೊಳ್ಳುವುದಕ್ಕೆ ಜನ ಹಿಂಜರಿಯುತ್ತಿದ್ದಾರೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಏಪ್ರಿಲ್ 2008ರಲ್ಲಿ 28.9 ಮಿಲಿಯನ್ ತಲುಪಿದ್ದ ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ ಇದೀಗ ಕುಸಿದಿದೆ. ಕಳೆದ ಮಾರ್ಚ್ ತಿಂಗಳ ಪ್ರಕಾರ ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ 20 ಮಿಲಿಯನ್ ಗಿಂತ ಕೆಳಗಿದೆ.
ಕಳೆದೆರಡು ವರ್ಷಗಳಿಂದ ಸುಮಾರು 10 ಮಿಲಿಯನ್ ಕಾರ್ಡುಗಳನ್ನು ರದ್ದುಪಡಿಸಲಾಗಿದೆ. 2006ರ ಆಗಸ್ಟ್ ನಿಂದ ಇದೇ ಮೊದಲ ಬಾರಿಗೆ ಕ್ರೆಡಿಟ್ ಕಾರ್ಡ್ ಬಳಕೆದಾರರ ಸಂಖ್ಯೆ 20 ಮಿಲಿಯನ್ ಗಿಂತ ಕೆಳಗೆ ಕುಸಿದಿದೆ.
ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದ ಸಾಲ ಕಾರ್ಡು ಮತ್ತು ವೈಯಕ್ತಿಕ ಸಾಲಗಳ ಮಾರುಕಟ್ಟೆ ತೀವ್ರವಾಗಿ ಕುಸಿದಿದ್ದು, ಬಳಸದ ಕ್ರೆಡಿಟ್ ಕಾರ್ಡುಗಳನ್ನು ಬ್ಯಾಂಕುಗಳು ರದ್ದುಪಡಿಸಿವೆ. ದೇಶದ ಅತೀ ದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕಿನ ಕ್ರೆಡಿಟ್ ಕಾರ್ಡು ಬಳಕೆದಾರರ ಸಂಖ್ಯೆ 8 ಮಿಲಿಯನ್ ನಿಂದ 5 ಮಿಲಿಯನ್ ಗೆ ಕುಸಿದಿದೆ. ದೇಶದ ಎರಡನೇ ದೊಡ್ಡ ಕ್ರೆಡಿಟ್ ಕಾರ್ಡುದಾರರನ್ನು ಹೊಂದಿರುವ ಬ್ಯಾಂಕ್ ಆಗಿರುವ ಎಚ್ ಡಿ ಎಫ್ ಸಿ ಬ್ಯಾಂಕು ಪ್ರಸ್ತುತ 4.3 ಮಿಲಿಯನ್ ಗ್ರಾಹಕರನ್ನು ಹೊಂದಿದ್ದು, ಪ್ರತೀ ತಿಂಗಳೂ 70ರಿಂದ 80 ಸಾವಿರ ನೂತನ ಕಾರ್ಡುಗಳನ್ನು ವಿತರಿಸುತ್ತಿದೆ ಎನ್ನಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications