ಭೀಕರ ಹತ್ಯಾಕಾಂಡ : ಪಿಎಂ ಜೊತೆ ಚಿದು ಚರ್ಚೆ

ಘಟನೆ ನಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋಮವಾರ ನಡೆದ ಭೀಕರ ನರಮೇಧ ತೀವ್ರ ಆತಂಕದ ಸಂಗತಿ ಎಂದು ಹೇಳಿದರು. ನಕ್ಸಲ್ ಸಮಸ್ಯೆ ಹತ್ತಿಕ್ಕಲು ಇಲಾಖೆಗೆ ಇನ್ನಷ್ಟು ಶಕ್ತಿ ಬೇಕಿದೆ. ಈ ಬಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದರು.
ದಂತೇವಾಡ : ಮತ್ತೆ ಭೀಕರ ಹತ್ಯಾಕಾಂಡ
ಕೇವಲ 45 ದಿನದೊಳಗೆ ನಾಲ್ಕನೇ ಬಾರಿಗೆ ಹತ್ಯಾಕಾಂಡ ನಡೆಸಿರುವ ನಕ್ಸಲರು ಛತ್ತೀಸ್ ಗಢದ ದಂತೇವಾಡದಲ್ಲಿ ಸೋಮವಾರ ನೆಲ ಬಾಂಬ್ ಸ್ಫೋಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 50 ಜನರನ್ನು ಬಲಿ ತೆಗೆದುಕೊಂಡಿದ್ದಾರೆ.
ದಂತೇವಾಡ ಜಿಲ್ಲೆಯ ಗಡಿರಸ್ ಭುಸಾರಸ್ ನಡುವೆ ಸೋಮವಾರ ಸಂಜೆ 4.45ಕ್ಕೆ ಈ ಹತ್ಯಾಕಾಂಡ ನಡೆದಿದೆ. ಸುರಂಗದ ಮೂಲಕ ಟಾರ್ ರಸ್ತೆ ಮಧ್ಯೆ ಸುಧಾರಿತ ಸ್ಪೋಟಕಗಳನ್ನು ಅಳವಡಿಸಿದ್ದ ನಕ್ಸಲರು, ಗಡಿರಸ್ ಭುಸಾರಸ್ ಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಸ್ಫೋಟಕದ ಮೇಲೆ ಬರುತ್ತಿದ್ದಂತೆಯೇ ನಿಯಂತ್ರಣ ಸಾಧನದ ಮೂಲಕ ಸ್ಪೋಟಿಸಿದ್ದಾರೆ.
ನಕ್ಸಲ್ ದಮನ ಕಾರ್ಯಾಚರಣೆಯಲ್ಲಿ ಪೊಲೀಸರಿಗೆ ನೆರವು ನೀಡುತ್ತಿದ್ದ ವಿಶೇಷ ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆದಿದೆ. ದಾಳಿಯಲ್ಲಿ 15 ವಿಶೇಷ ಪೊಲೀಸ್ ಅಧಿಕಾರಿಗಳು, 5 ಮಂದಿ ಸ್ಥಳೀಯ ಪೊಲೀಸರು ಮತ್ತು 30 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ. ಸರಕಾರ ಕೈಗೊಂಡಿರುವ ನಕ್ಸಲ್ ದಮನ ಕಾರ್ಯಾಚರಣೆ ಖಂಡಿಸಿ ಛತ್ತೀಸ್ ಗಢ ಸೇರಿದಂತೆ ಐದು ರಾಜ್ಯಗಳಲ್ಲಿ ಮಂಗಳವಾರದಿಂದ 48 ಗಂಟೆಗಳ ಬಂದ್ ಗೆ ಮಾವೋವಾದಿಗಳು ಕರೆ ನೀಡಿದ್ದಾರೆ. ಬಂದ್ ಆರಂಭಗೊಳ್ಳುವ 12 ಗಂಟೆ ಮೊದಲು ರಕ್ತದೊಕುಳಿ ಹರಿಸಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications