ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರೆಡ್ಡಿಗಳ ಅನರ್ಹಕ್ಕೆ ರಾಜ್ಯಪಾಲರ ಪಟ್ಟು
ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ ನಂತರ ರಾಜಭವನದ ಮುಂಭಾಗದ ಮೆಟ್ಟಿಲುಗಳ ಮೇಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೂ ಇದೇ ಮಾತನ್ನು ಸ್ಪಷ್ಟಪಡಿಸಿದ್ದೇನೆ ಎಂದರು. ಪ್ರವಾಸೋದ್ಯಮ ಸಚಿವ ಜನಾರ್ದನರೆಡ್ಡಿ, ಕಂದಾಯ ಸಚಿವ ಕರುಣಾಕರರೆಡ್ಡಿ ಮತ್ತು ಕುಟುಂಬ ಕಲ್ಯಾಣ ಮಂತ್ರಿ ಬಿ ಶ್ರೀರಾಮುಲು ವಿರುದ್ಧ ಚುನಾವಣೆ ವೇಳೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದವು.
ರಾಜ್ಯಸರಕಾರ ಆ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದಿವೆ. ಅದು ಕಾನೂನು ಬಾಹಿರ ಕ್ರಮವಾಗಿದೆ. ಆದ್ದರಿಂದಲೇ ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲನೆ ಮಾಡಿ ಶಿಫಾರಸ್ಸು ಮಾಡುವಂತೆ ತಮಗೆ ಪತ್ರ ಬರೆದಿತ್ತು. ಈ ಬಗ್ಗೆ ತಾವು ಪರಿಶೀಲಿಸಿರುವುದಾಗಿ ಅವರು ಸಮರ್ಥಿಸಿಕೊಂಡರು. ಅಲ್ಲದೇ ವಿಧಾನ ಪರಿಷತ್ ಸದಸ್ಯ ಕೆ ಸಿ ಕೊಂಡಯ್ಯ ಅವರು ಸಾಕ್ಷಿ ಸಮೇತ ದೂರು ನೀಡಿದ್ದರು. ಈ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸಚಿವರಿಗೆ ದೂರು ನೀಡಲಾಗಿತ್ತು ಎಂದು ರಾಜ್ಯಪಾಲರು ಹೇಳಿದರು.
Comments
ಎಚ್ಆರ್ ಭಾರದ್ವಾಜ್ ಯಡಿಯೂರಪ್ಪ ಜನಾರ್ದನ ರೆಡ್ಡಿ ಗಣಿಗಾರಿಕೆ ಚುನಾವಣೆ ಆಯೋಗ ಬಳ್ಳಾರಿ hr bhardwaj yediyurappa janardhana reddy mining election commission
Story first published: Tuesday, May 18, 2010, 14:30 [IST]