ಗೋಪಿಶೆಟ್ಟಿಕೊಪ್ಪ ಕೆರೆ ಅಭಿವೃದ್ಧಿಗೆ ಕ್ರಮ: ಸಿಎಂ

ಗೋಪಿಶೆಟ್ಟಿಕೊಪ್ಪದ ಕೆರೆಯ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡುತ್ತಿದ್ದರು. 37.5 ಎಕರೆ ವಿಶಾಲವಾಗಿರುವ ಗೋಪಿಶೆಟ್ಟಿಕೊಪ್ಪದ ಕೆರೆಯನ್ನು ಧಾರವಾಡದ ಕೆರೆಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವುದು, ವಾಕಿಂಗ್ಟ್ರ್ಯಾಕ್ ಹಾಗೂ ಉದ್ಯಾನವನ ನಿರ್ಮಾಣ ಕಾಮಗಾರಿಯನ್ನು ಈ ತಿಂಗಳ ಅಂತ್ಯದೊಳಗಾಗಿ ಆರಂಭಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಕೆರೆಗೆ ಬರುವ ಕೊಳಚೆ ನೀರನ್ನು ತಡೆಯಲು, ಈಗಿರುವ ನೀರನ್ನು ಇತರೆ ಬಳಕೆಗೆ ಅನುಕೂಲವಾಗುವಂತೆ ಹಾಗೂ ಅಗತ್ಯ ವಿದ್ದರೆ ಕೆರೆಯ ಹೂಳುತೆಗೆದು ಅಭಿವೃದ್ಧಿ ಪಡಿಸಲಾಗುವುದೆಂದರು. ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಂಸದ ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ. ಹೇಮಚಂದ್ರ, ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications