ಸುದ್ದಿವಾಹಿನಿ ವಿರುದ್ಧ ಶ್ರೀರಾಮ ಸೇನೆ ಸಮರ

ಶ್ರೀರಾಮ ಸೇನೆ ನಗರ ಸಂಚಾಲಕ ಟಿ.ಎಸ್. ವಸಂತ್ ಕುಮಾರ್, ಕುಟುಕು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಪುಷ್ಟ್ ಕುಮಾರ್, ತೆಹಲ್ಕಾ ಪತ್ರಿಕೆಯ ಸಂಪಾದಕ ಮತ್ತು ಪ್ರಕಾಶಕ, ಹೆಡ್ಲೈನ್ಸ್ ಟುಡೆಯ ರಾಹುಲ್ ಕನ್ವಲ್ ಹಾಗೂ ಆಜ್ತಕ್ ಸುದ್ದಿವಾಹಿನಿಯ ಸುದ್ದಿ ನಿರ್ದೇಶಕ ಕ್ಯೂ. ಡಬ್ಲ್ಯೂ. ನಖ್ವಿ ವಿರುದ್ಧ ದೂರು ಅರ್ಜಿ ಸಲ್ಲಿಸಿದ್ದಾರೆ.
'ಲವ್ ಜಿಹಾದ್' ಕುರಿತ ವಸ್ತು ಪ್ರದರ್ಶನ ವಿಷಯ ಪ್ರಸ್ತಾಪಿಸಿ ಪುಷ್ಪ್ ಕುಮಾರ್ ಎನ್ನುವವರು ನನಗೆ ಫೆ. 25 ಕ್ಕೆ ಕರೆ ಮಾಡಿದ್ದರು. ಈ ಬಗ್ಗೆ ಫೆ. 27ಕ್ಕೆ ನಮ್ಮಿಬ್ಬರ ಭೇಟಿ ಆಯಿತು. ಈ ಸಂದರ್ಭದಲ್ಲಿ ನಮ್ಮ ಮಧ್ಯೆ ನಡೆದ ಸಂಭಾಷಣೆ ಯನ್ನು ಧ್ವನಿ ಮುದ್ರಣ ಮಾಡಿಕೊಳ್ಳಲಾಗಿದೆ. ಆದರೆ ತಮಗೆ ಬೇಕಾದ ರೀತಿಯಲ್ಲಿ ಧ್ವನಿ ಮುದ್ರಣವನ್ನು ಮಾರ್ಪಡಿಸಿ ಸುದ್ದಿವಾಹಿನಿಗಳಲ್ಲಿ ಬಿತ್ತರಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಬಿತ್ತರವಾದ ದೃಶ್ಯಾವಳಿಗಳು ಸಂಪೂರ್ಣ ಮಾರ್ಪಾಟು ಮಾಡಲಾಗಿದ್ದು ಸುದ್ದಿವಾಹಿನಿ ತನಗೆ ಬೇಕಾದ ರೀತಿಯಲ್ಲಿ ತಿದ್ದಿಕೊಂಡಿದೆ. ಇದರಿಂದ ಶ್ರೀರಾಮ ಸೇನೆಯ ಸಂಘಟನೆ ಮತ್ತು ಅದರ ಮುಖ್ಯಸ್ಥರ ಘನತೆಗೆ ಧಕ್ಕೆ ಬಂದಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಆಕ್ಷೇಪಿಸಿದರು.
ಸಂಘಟನೆ ಮತ್ತು ಅದರ ಮುಖಂಡರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂಥ ಈ ಕುಟುಕು ರ್ಯಚರಣೆಯಲ್ಲಿ ಭಾಗಿಯಾದವರು ಮತ್ತು ಅದನ್ನು ಬಿತ್ತರಿಸಿದ ಸುದ್ದಿವಾಹಿನಗಳ ವಿರುದ್ದ ಭಾರತೀಯ ದಂಡ ಸಂಹಿತೆ 120(B), 425, 463, 464, 468,469, 470, 471 ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಪೀಠದ ಮೊರೆಹೊಕ್ಕಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications