ಸುದ್ದಿವಾಹಿನಿ ವಿರುದ್ಧ ಶ್ರೀರಾಮ ಸೇನೆ ಸಮರ

ಶ್ರೀರಾಮ ಸೇನೆ ನಗರ ಸಂಚಾಲಕ ಟಿ.ಎಸ್. ವಸಂತ್ ಕುಮಾರ್, ಕುಟುಕು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಪುಷ್ಟ್ ಕುಮಾರ್, ತೆಹಲ್ಕಾ ಪತ್ರಿಕೆಯ ಸಂಪಾದಕ ಮತ್ತು ಪ್ರಕಾಶಕ, ಹೆಡ್ಲೈನ್ಸ್ ಟುಡೆಯ ರಾಹುಲ್ ಕನ್ವಲ್ ಹಾಗೂ ಆಜ್ತಕ್ ಸುದ್ದಿವಾಹಿನಿಯ ಸುದ್ದಿ ನಿರ್ದೇಶಕ ಕ್ಯೂ. ಡಬ್ಲ್ಯೂ. ನಖ್ವಿ ವಿರುದ್ಧ ದೂರು ಅರ್ಜಿ ಸಲ್ಲಿಸಿದ್ದಾರೆ.
'ಲವ್ ಜಿಹಾದ್' ಕುರಿತ ವಸ್ತು ಪ್ರದರ್ಶನ ವಿಷಯ ಪ್ರಸ್ತಾಪಿಸಿ ಪುಷ್ಪ್ ಕುಮಾರ್ ಎನ್ನುವವರು ನನಗೆ ಫೆ. 25 ಕ್ಕೆ ಕರೆ ಮಾಡಿದ್ದರು. ಈ ಬಗ್ಗೆ ಫೆ. 27ಕ್ಕೆ ನಮ್ಮಿಬ್ಬರ ಭೇಟಿ ಆಯಿತು. ಈ ಸಂದರ್ಭದಲ್ಲಿ ನಮ್ಮ ಮಧ್ಯೆ ನಡೆದ ಸಂಭಾಷಣೆ ಯನ್ನು ಧ್ವನಿ ಮುದ್ರಣ ಮಾಡಿಕೊಳ್ಳಲಾಗಿದೆ. ಆದರೆ ತಮಗೆ ಬೇಕಾದ ರೀತಿಯಲ್ಲಿ ಧ್ವನಿ ಮುದ್ರಣವನ್ನು ಮಾರ್ಪಡಿಸಿ ಸುದ್ದಿವಾಹಿನಿಗಳಲ್ಲಿ ಬಿತ್ತರಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಬಿತ್ತರವಾದ ದೃಶ್ಯಾವಳಿಗಳು ಸಂಪೂರ್ಣ ಮಾರ್ಪಾಟು ಮಾಡಲಾಗಿದ್ದು ಸುದ್ದಿವಾಹಿನಿ ತನಗೆ ಬೇಕಾದ ರೀತಿಯಲ್ಲಿ ತಿದ್ದಿಕೊಂಡಿದೆ. ಇದರಿಂದ ಶ್ರೀರಾಮ ಸೇನೆಯ ಸಂಘಟನೆ ಮತ್ತು ಅದರ ಮುಖ್ಯಸ್ಥರ ಘನತೆಗೆ ಧಕ್ಕೆ ಬಂದಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಆಕ್ಷೇಪಿಸಿದರು.
ಸಂಘಟನೆ ಮತ್ತು ಅದರ ಮುಖಂಡರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂಥ ಈ ಕುಟುಕು ರ್ಯಚರಣೆಯಲ್ಲಿ ಭಾಗಿಯಾದವರು ಮತ್ತು ಅದನ್ನು ಬಿತ್ತರಿಸಿದ ಸುದ್ದಿವಾಹಿನಗಳ ವಿರುದ್ದ ಭಾರತೀಯ ದಂಡ ಸಂಹಿತೆ 120(B), 425, 463, 464, 468,469, 470, 471 ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಪೀಠದ ಮೊರೆಹೊಕ್ಕಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications